ಭಾರೀ ಹಿನ್ನಡೆ; ಉದ್ಧವ್ ಠಾಕ್ರೆ ಮತ್ತೊಬ್ಬ ಆಪ್ತ ಖೋಟ್ಕರ್ ಶೀಘ್ರದಲ್ಲೇ ಶಿಂಧೆ ಪಾಳಯಕ್ಕೆ!
ಜಲ್ನಾ ಜಿಲ್ಲೆಯಲ್ಲಿ ಖೋಟ್ಕರ್ ಪ್ರಭಾವಿ ಶಿವಸೇನಾ ಮುಖಂಡರಾಗಿದ್ದಾರೆ ಎಂದು ವರದಿ ತಿಳಿಸಿದೆ.
Team Udayavani, Jul 27, 2022, 9:52 AM IST
ನವದೆಹಲಿ:ಶಿವಸೇನಾ ಹಿರಿಯ ಮುಖಂಡ, ಉದ್ಧವ್ ಠಾಕ್ರೆ ಆಪ್ತರಲ್ಲಿ ಒಬ್ಬರಾದ ಅರ್ಜುನ್ ಖೋಟ್ಕರ್ ಶೀಘ್ರದಲ್ಲಿಯೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯ ಬಂಡಾಯದ ಗುಂಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೇಂದ್ರ ಸಚಿವ, ಬಿಜೆಪಿ ಮುಖಂಡ ರಾವ್ ಸಾಹೇಬ್ ದಾನ್ವೆ ತಿಳಿಸಿದ್ದಾರೆ.
ಇದನ್ನೂ ಓದಿ:ಅಶ್ಲೀಲವಾಗಿ ಫೋಟೋ ಮಾರ್ಫಿಂಗ್ ಮಾಡಿ ಸಂದೇಶ ರವಾನೆ
ಸೋಮವಾರ ದೆಹಲಿಯಲ್ಲಿ ಅರ್ಜುನ್ ಖೋಟ್ಕರ್ ಅವರು ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ವರದಿ ಹೇಳಿದೆ. ಖೋಟ್ಕರ್ ಅವರು ಶಿಂಧೆ ಗುಂಪಿಗೆ ಸೇರ್ಪಡೆಯಾಗುತ್ತಾರೋ ಅಥವಾ ಇಲ್ಲವೊ ಎಂಬ ಪ್ರಶ್ನೆಗೆ ಸಚಿವ ದಾನ್ವೆ, ಖೋಟ್ಕರ್ ಶಿಂಧೆಗೆ ಗುಂಪಿಗೆ ಸೇರ್ಪಡೆಯಾಗಲಿದ್ದಾರೆ. ಶಿಂಧೆ ಜತೆಗಿನ ಮಾತುಕತೆ ವೇಳೆ ನಾನು ಕೂಡಾ ಹಾಜರಿದ್ದೆ, ಈಗ ಭಿನ್ನಾಭಿಪ್ರಾಯಗಳು ಬಗೆಹರಿದಿದೆ ಎಂದು ಹೇಳಿದರು.
ಅರ್ಜುನ್ ಖೋಟ್ಕರ್ ಏಕನಾಥ್ ಶಿಂಧೆ ಗುಂಪಿಗೆ ಸೇರ್ಪಡೆಯಾಗುತ್ತಿರುವುದು ಉದ್ಧವ್ ಠಾಕ್ರೆಗೆ ಭಾರೀ ಹಿನ್ನಡೆಯಾಗಲಿದೆ. ಜಲ್ನಾ ಜಿಲ್ಲೆಯಲ್ಲಿ ಖೋಟ್ಕರ್ ಪ್ರಭಾವಿ ಶಿವಸೇನಾ ಮುಖಂಡರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಶಿವಸೇನೆ ಇಬ್ಭಾಗವಾಗಲಿದೆಯೇ ಎಂಬ ಪ್ರಶ್ನೆಗೆ, ಹೌದು ಶಿಂಧೆಯ ಶಿವಸೇನಾ ಸೂಕ್ತವಾದ ಪಕ್ಷವಾಗಿದ್ದು, ಜನರು ಕೂಡಾ ಶಿಂಧೆ ಬಣದ ಶಿವಸೇನಾಕ್ಕೆ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ಹೊಂದಿರುವುದಾಗಿ ದಾನ್ವೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ