ಎಐಎಂಐಎಂ ಮೈತ್ರಿ ಕೊಡುಗೆ ಬಿಜೆಪಿಯ ಸಂಚು: ಉದ್ಧವ್ ಠಾಕ್ರೆ
Team Udayavani, Mar 20, 2022, 9:30 PM IST
ಮುಂಬಯಿ: ಎಐಎಂಐಎಂನ ಮೈತ್ರಿ ಕೊಡುಗೆಯು ಬಿಜೆಪಿ ನಡೆಸಿರುವ ಒಳಸಂಚಿನ ಒಂದು ಭಾಗ ಎಂದು ಗಂಭೀರವಾಗಿ ಆರೋಪಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಹಿಂದುತ್ವವಾದಿ ಪಕ್ಷವಾಗಿರುವ ಶಿವಸೇನೆಯು ಎಐಎಂಐಎಂನಂಥ ಪಕ್ಷಗಳ ಜತೆಗೆ ಯಾವತ್ತೂ ಮೈತ್ರಿ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಪಕ್ಷದ ಸಂಸದರು ಹಾಗೂ ಪದಾಧಿಕಾರಿಗಳ ಜತೆಯಲ್ಲಿ ವರ್ಚುವಲ್ ಸಭೆ ನಡೆಸಿದ ಅವರು ಹಿಂದುತ್ವ ಹಾಗೂ ಕೆಲವು ಪ್ರಮುಖ ವಿಷಯಗಳಲ್ಲಿ ಬಿಜೆಪಿ ನಡೆಯನ್ನು ಟೀಕಿಸಿದರು.
ಎಐಎಂಐಎಂಯ ಮೈತ್ರಿಯನ್ನು ಕೇಳಿದ್ದಾದರೂ ಯಾರು? ಇದು ಬಿಜೆಪಿಯ ಒಂದು ತಂತ್ರ ಹಾಗೂ ಸಂಚಿನ ಭಾಗವಾಗಿದೆ. ಬಿಜೆಪಿ ಹಾಗೂ ಎಐಎಂಐಎಂ ರಹಸ್ಯವಾಗಿ ಒಪ್ಪಂದ ಮಾಡಿಕೊಂಡಿದ್ದು, ಶಿವಸೇನೆಯನ್ನು ಅವಮಾನಿಸಲು ಮೈತ್ರಿಯ ಮಾತಾಡಿದ್ದಾರೆ. ಆ ಮೂಲಕ ಶಿವಸೇನೆಯ ಹಿಂದುತ್ವ ಸಿದ್ಧಾಂತವನ್ನು ಅವಮಾನಿಸಲು ಮುಂದಾಗಿದ್ದಾರೆ ಎಂದು ಠಾಕ್ರೆ ಆರೋಪಿಸಿದರು.
ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ನಮ್ಮ ಪಕ್ಷವು ಶಿವಸೇನೆ ಜತೆಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿದೆ ಎಂದು ಎಐಎಂಐಎಂ ಸಂಸದ ಇಮ್ತಿಯಾಜ್ ಜಲೀಲ್ ಅವರು ಶನಿವಾರ ಹೇಳಿದ್ದರು. ಈ ಬಳಿಕ ಶಿವಸೇನೆಯ ರಾಜ್ಯಸಭಾ ಸದಸ್ಯ ರಾವುತ್ ಸಹಿತ ಪ್ರಮುಖ ನಾಯಕರು ಜಲೀಲ್ ಹೇಳಿಕೆಗೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ
Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?
Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್ ದರ ದುಪ್ಪಟ್ಟು
KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್ನಿಂದ ಅಲ್ಲ: ಪ್ರಭಾಕರ ಕೋರೆ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…