ನಿಮ್ಮ ವಾದ ಮತ್ತೊಮ್ಮೆ ಸಲ್ಲಿಸಿ; ಏಕನಾಥ ಶಿಂಧೆ ಪರ ವಕೀಲರಿಗೆ ಸುಪ್ರೀಂಕೋರ್ಟ್‌ ಸೂಚನೆ

ನ್ಯಾಯಾಲಯದಲ್ಲಿ ಉದ್ಧವ್‌-ಶಿಂಧೆ ಬಣದ ಕಾನೂನು ಸಮರ ಶುರು

Team Udayavani, Aug 4, 2022, 7:30 AM IST

ನಿಮ್ಮ ವಾದ ಮತ್ತೊಮ್ಮೆ ಸಲ್ಲಿಸಿ; ಏಕನಾಥ ಶಿಂಧೆ ಪರ ವಕೀಲರಿಗೆ ಸುಪ್ರೀಂಕೋರ್ಟ್‌ ಸೂಚನೆ

ಮುಂಬೈ: ಶಿವಸೇನೆ ನಮಗೆ ಸೇರಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಉದ್ಧವ್‌ ಠಾಕ್ರೆ ಮತ್ತು ಏಕನಾಥ ಶಿಂಧೆ ಬಣಗಳ ನಡುವೆ ಸುಪ್ರೀಂಕೋರ್ಟ್‌ನಲ್ಲಿ ಬುಧವಾರದಿಂದ ನ್ಯಾಯಾಂಗ ಹೋರಾಟ ಶುರುವಾಗಿದೆ.

ಸಿಎಂ ಏಕನಾಥ ಶಿಂಧೆ ಬಣದ ನ್ಯಾಯವಾದಿ ಹರೀಶ್‌ ಸಾಳ್ವೆ ಅವರಿಗೆ ಹೊಸತಾಗಿ ತಮ್ಮ ವಾದವನ್ನು ಲಿಖಿತವಾಗಿ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾ.ಕೃಷ್ಣ ಮುರಾರಿ ಮತ್ತು ನ್ಯಾ.ಹಿಮಾ ಕೋಹ್ಲಿ ಅವರನ್ನೊಳಗೊಂಡ ನ್ಯಾಯಪೀಠ ಸೂಚಿಸಿದೆ.

ಮಾಜಿ ಸಿಎಂ ಉದ್ಧವ್‌ ಠಾಕ್ರೆ ಬಣದ ಪರವಾಗಿ ವಾದಿಸಿದ ರಾಜ್ಯಸಭಾ ಸದಸ್ಯ ಮತ್ತು ನ್ಯಾಯವಾದಿ ಕಪಿಲ್‌ ಸಿಬಲ್‌ “ಸಂವಿಧಾನದ ಹತ್ತನೇ ವಿಧಿಯ ಅನ್ವಯ ಏಕನಾಥ ಶಿಂಧೆ ಅವರಿಗೆ ಬೆಂಬಲ ಸೂಚಿಸಿದ ಶಾಸಕರು ಅನರ್ಹತೆಯಿಂದ ಪಾರಾಗಲು ಮಾತ್ರ ಸಾಧ್ಯ. ಆ ಗುಂಪನ್ನು ಇನ್ನೊಂದು ಪಕ್ಷದ ಜತೆಗೆ ವಿಲೀನಗೊಳಿಸಲು ಅವರಿಗೆ ಅವಕಾಶ ಇದೆಯೇ ಹೊರತು ಬೇರೆ ರಕ್ಷಣಾ ವ್ಯವಸ್ಥೆಗಳಿಲ್ಲ ಎಂದರು.

“ನಿಗದಿತ ಪಕ್ಷದಿಂದ ಸ್ಪರ್ಧಿಸಿ ಶಾಸಕನಾಗಿ ಆಯ್ಕೆಯಾಗಿ ನಂತರ ಆ ಪಕ್ಷದ ಜತೆಗೆ ಬಾಂಧವ್ಯ ಕಡಿದುಕೊಂಡರೆ ಎಲ್ಲವನ್ನೂ ದೂರ ಮಾಡಿದಂತೆ ಆಗಲಾರದು’ ಎಂದರು ಕಪಿಲ್‌ ಸಿಬಲ್‌. ಸಿಎಂ ಏಕನಾಥ ಶಿಂಧೆ ಪರವಾಗಿ ವಾದಿಸಿದ ಹರೀಶ್‌ ಸಾಳ್ವೆ ಪಕ್ಷಾಂತರ ನಿಷೇಧ ಕಾಯ್ದೆ ಎನ್ನುವುದು ಬಹುಮತ ಕಳೆದುಕೊಂಡ ಪಕ್ಷಕ್ಕೆ ಸಂಖ್ಯಾಬಲವನ್ನು ಹಿಡಿದಿಟ್ಟುಕೊಳ್ಳುವ ಅಸ್ತ್ರವಾಗಬಾರದು ಎಂದರು.

ಇದು ಪಕ್ಷಾಂತರ ನಿಷೇಧ ಕಾಯ್ದೆ ವ್ಯಾಪ್ತಿಗೆ ಬರುವ ಅಂಶವಲ್ಲ. ಇದು ಒಂದು ಪಕ್ಷದ ಒಳಗಿನ ಆಂತರಿಕ ಕಲಹ. ಸ್ವಯಂ ಪ್ರೇರಿತವಾಗಿ ಯಾರಿಗೂ ಪಕ್ಷದ ಸದಸ್ಯತ್ವ ನೀಡಲಾಗಿಲ್ಲ ಎಂದರು ಸಾಳ್ವೆ.

ವಾದ ಆಲಿಸಿದ ನ್ಯಾಯಪೀಠ ನ್ಯಾಯವಾದಿ ಹರೀಶ್‌ ಸಾಳ್ವೆ ಅವರಿಗೆ ತಮ್ಮ ವಾದವನ್ನು ಹೊಸತಾಗಿ ಬರೆದುಕೊಂಡು ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಟಾಪ್ ನ್ಯೂಸ್

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.