PAKಗೆ ಮತ್ತೆ ಮುಖಭಂಗ; ಏನಿದು ಹೈದರಾಬಾದ್ ನಿಜಾಮ್ ಸಂಪತ್ತಿನ ಕೇಸ್, ಭಾರತಕ್ಕೆ ಮೇಲುಗೈ


Team Udayavani, Oct 2, 2019, 6:21 PM IST

Nizam-Fund

ಯುನೈಟೆಡ್ ಕಿಂಗ್ ಡಮ್: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿರುವ ವಿಚಾರ ಸೇರಿದಂತೆ ಕೆಲವು ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕ್ ಮುಖಭಂಗ ಅನುಭವಿಸಿದ್ದು, ಭಾರತ ಮೇಲುಗೈ ಸಾಧಿಸಿರುವ ನಡುವೆ ಇದೀಗ ಭಾರತ ಮತ್ತೊಂದು ಐತಿಹಾಸಿಕ ಗೆಲುವು ಸಾಧಿಸಿದೆ.

ಹೈದರಾಬಾದ್ ನಿಜಾಮ್ ಗೆ ಸೇರಿದ್ದ ಸಂಪತ್ತಿ(ಅಂದಾಜು 35 ಮಿಲಿಯನ್) ನ ಮೇಲಿನ ಕುರಿತ ಪಾಕಿಸ್ತಾನದ ಬೇಡಿಕೆಯನ್ನು ತಿರಸ್ಕರಿಸಿ, ಭಾರತದ ನಿಲುವನ್ನು ಯುನೈಟೆಡ್ ಕಿಂಗ್ ಡಮ್ ಹೈಕೋರ್ಟ್  ಬುಧವಾರ ಎತ್ತಿಹಿಡಿದಿದೆ.

ಹೈದರಾಬಾದ್ ನಿಜಾಮ್ ಏನಿದು ಪ್ರಕರಣ?

ಹೈದರಾಬಾದ್ ನಿಜಾಮ್ ಗೆ ಸೇರಿದ್ದ ಬರೋಬ್ಬರಿ 35 ಮಿಲಿಯನ್ (ಬ್ರಿಟಿಷ್ ಪೌಂಡ್ಸ್) ನಷ್ಟು ಸಂಪತ್ತು ತನಗೆ ಸೇರಬೇಕೆಂದು ಪಾಕಿಸ್ತಾನ ವಾದಿಸಿದ್ದ 70 ವರ್ಷಗಳಷ್ಟು ಹಳೆಯ ಪ್ರಕರಣ ಇದಾಗಿದೆ.

ಹೈದರಾಬಾದ್ ನಿಜಾಮ್ ಗೆ ಸೇರಿದ್ದ ಸಂಪತ್ತಿನ ಮೇಲೆ ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ ಎಂದು ಯುಕೆ ಕೋರ್ಟ್ ತೀರ್ಪು ನೀಡಿದೆ. ಲಂಡನ್ ನ ವೆಸ್ಟ್ ಮಿನಿಸ್ಟರ್ ಬ್ಯಾಂಕ್ ನಲ್ಲಿರುವ ನಿಜಾಮ್ ಗೆ ಸೇರಿದ ಸಂಪತ್ತು ತನಗೆ ಸೇರಿದ್ದು ಎಂದು ಪಾಕಿಸ್ತಾನ ಮತ್ತೆ ಯುಕೆ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಇದರಿಂದಾಗಿ ಹೈದರಾಬಾದ್ ನಿಜಾಮನ ಸಂಪತ್ತು ಭಾರತಕ್ಕೆ ಸೇರಿದ್ದು ಎಂದು ಯುಕೆ ಕೋರ್ಟ್ ತೀರ್ಪು ನೀಡುವ ಮೂಲಕ ಪಾಕಿಸ್ತಾನ ಮತ್ತೊಮ್ಮೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗ ಅನುಭವಿಸಿದೆ.

ಹೈದರಾಬಾದ್ ನ 7ನೇ ನಿಜಾಮ್ 1948ರಲ್ಲಿ ಒಂದು ಮಿಲಿಯನ್ ಪೌಂಡ್ ಹಣವನ್ನು ಲಂಡನ್ ಬ್ಯಾಂಕ್ ಗೆ ವರ್ಗಾಯಿಸಿದ್ದರು. ಇದರ ಮೌಲ್ಯ ಈಗ 35 ಮಿಲಿಯನ್ ಪೌಂಡ್. ಈ ಐತಿಹಾಸಿಕ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಂಡಿತ್ತು.

7ನೇ ನಿಜಾಮನ ಮೊಮ್ಮಕ್ಕಳಾದ ಪ್ರಸ್ತುತ ಟರ್ಕಿ ನಿವಾಸಿಗಳಾಗಿರುವ ಮುಕರ್ರಮ್ ಜಾ ಮತ್ತು ಮುಫಾಖಂ ಜಾ ಒಂದು ಕಡೆಯಾದರೆ, ಮತ್ತೊಂದು ಕಡೆ ಭಾರತ, ಪಾಕಿಸ್ತಾನದ ನಡುವೆ ಹಣಕ್ಕಾಗಿ ಕಾನೂನು ಸಮರ ನಡೆದಿತ್ತು. 1948ರಲ್ಲಿ ಹೈದರಬಾದ್ ಗೆ ಶಸ್ತ್ರಾಸ್ತ್ರ ಕಳುಹಿಸಿದ್ದಕ್ಕೆ ಪಾವತಿಸಿದ ಹಣವಾಗಿದ್ದು, ಅದು ತನಗೆ ಸೇರಬೇಕಾಗಿದೆ ಎಂದು ಪಾಕಿಸ್ತಾನ ವಾದ ಮಂಡಿಸಿತ್ತು.

ಅಂದು ಹೈದರಾಬಾದ್ ನ 7ನೇ ನಿಜಾಮ ಲಂಡನ್ ನಲ್ಲಿದ್ದ ಪಾಕಿಸ್ತಾನದ ರಾಯಭಾರಿ ಹಬೀಬ್ ಇಬ್ರಾಹಿಂ ರಹೀಮತೊಲ್ಲಾ ಹೆಸರಿಗೆ ಒಂದು ಮಿಲಿಯನ್ ಪೌಂಡ್ ಹಣವನ್ನು ವರ್ಗಾಯಿಸಿದ್ದರು. ಇದನ್ನು ಸುರಕ್ಷತೆಯ ದೃಷ್ಟಿಯಿಂದ ಈ ಹಣವನ್ನು ನನ್ನ ಹೆಸರನ್ನು ದಾಖಲಿಸಿ ಬ್ಯಾಂಕ್ ನಲ್ಲಿ ಇರಿಸಬೇಕೆಂದು ನಿಜಾಮ್ ಹೇಳಿದ್ದರು. ಈ ಹಣ ಲಂಡನ್ ನ ವೆಸ್ಟ್ ಮಿನಿಸ್ಟರ್ ಬ್ಯಾಂಕ್ ನಲ್ಲಿ ಇದ್ದು ಇದೀಗ ಏಳು ದಶಕಗಳೇ ಕಳೆದಿದೆ.

ಈ ಕುರಿತು ತಲೆದೋರಿದ ವಿವಾದಕ್ಕೆ ಯುಕೆ ಹೈಕೋರ್ಟ್ ಜಡ್ಜ್ ಮರ್ಕ್ಯೂಸ್ ಸ್ಮಿತ್ 166 ಪುಟಗಳ ದೀರ್ಘ ತೀರ್ಪಿನಲ್ಲಿ, ಭಾರತದ ಆಪರೇಶನ್ ಪೋಲೋ ಹಾಗೂ ಆ ಬಳಿಕ ನಡೆದ ಬೆಳವಣಿಗೆ ಮತ್ತು ಲಂಡನ್ ನಲ್ಲಿರುವ ನಿಜಾಮನ ಹಣ ಭಾರತಕ್ಕೆ ಸೇರಿದ್ದು ಎಂದು ರಾಷ್ಟ್ರಪತಿ ಹಕ್ಕು ಮಂಡಿಸಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ಹೈದರಾಬಾದ್ 7ನೇ ನಿಜಾಮ ಅಂದು ಭಾರತದೊಳಕ್ಕೆ ವಿಲೀನವಾಗಲು ನಿರಾಕರಿಸಿದ್ದು ಮತ್ತು ಈ ಹಣವನ್ನು ಶಸ್ತ್ರಾಸ್ತ್ರ ಖರೀದಿಸಲು ವರ್ಗಾಯಿಸಿದ್ದು ಎಂದು ಒಪ್ಪಲು ಸಾಧ್ಯವಿಲ್ಲ. ಅಷ್ಟೇ ಅಲ್ಲ ಶಸ್ತ್ರಾಸ್ತ್ರ ಖರೀದಿಗಾಗಿ ಪಾಕಿಸ್ತಾನಕ್ಕೆ ನೀಡಿದ ಪರಿಹಾರದ ಹಣ ಎಂಬುದನ್ನೂ ಒಪ್ಪಲು ಅಸಾಧ್ಯ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ನಿಜಾಮ್ ಸಂಪತ್ತು ತಮಗೆ ಸೇರಬೇಕೆಂದು ವಾದಿಸುತ್ತಿರುವ ನಮ್ಮ ಕಕ್ಷಿದಾರರು ಈ ವಿವಾದ ತಲೆಎತ್ತಿದ್ದ ಸಂದರ್ಭದಲ್ಲಿ ಚಿಕ್ಕ ಮಕ್ಕಳಾಗಿದ್ದರು. ಈಗ ಅವರಿಗೆ 80 ವರ್ಷ. ಆ ನಿಟ್ಟಿನಲ್ಲಿ ಈ ವಿವಾದ ಅವರ ಜೀವಿತಾವಧಿಯಲ್ಲೇ ಬಗೆಹರಿದಿರುವುದು ದೊಡ್ಡ ನಿರಾಳತೆ ಸಿಕ್ಕಂತಾಗಿದೆ ಎಂದು ಯುಕೆ ಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ.

ಅಲ್ಲದೇ ನಿಜಾಮನ ಸಂಪತ್ತು ಭಾರತಕ್ಕೆ ಸೇರಿಲ್ಲ ಎಂಬ ಪಾಕಿಸ್ತಾನದ ವಾದವನ್ನು ಸಾರಸಗಟಾಗಿ ತಳ್ಳಿಹಾಕಿದೆ. ಹೈದರಾಬಾದ್ ಅನ್ನು ಭಾರತ ವಶಪಡಿಸಿಕೊಂಡಿರುವುದು ಕಾನೂನು ಬಾಹಿರ ಎಂಬ ವಾದವನ್ನೂ ಕೋರ್ಟ್ ತಿರಸ್ಕರಿಸಿದೆ.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.