ರಾಜಕೀಯಕ್ಕಾಗಿ ಕೇಸಲ್ಲಿ ನನ್ನ ಹೆಸರು: ಉಮಾ
Team Udayavani, Jul 3, 2020, 7:05 AM IST
ಲಕ್ನೋ: ರಾಜಕೀಯ ಕಾರಣಗಳಿಗಾಗಿ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ತನ್ನ ಹೆಸರನ್ನು ಸೇರಿಸಲಾಗಿದೆ ಎಂದು ಬಿಜೆಪಿ ನಾಯಕಿ ಉಮಾ ಭಾರತಿ ಆರೋಪಿಸಿದ್ದಾರೆ.
ಲಕ್ನೋದಲ್ಲಿರುವ ಸಿಬಿಐಯ ವಿಶೇಷ ಕೋರ್ಟ್ಗೆ ಗುರುವಾರ ಖುದ್ದು ಹಾಜರಾಗಿ ನೀಡಿದ ಹೇಳಿಕೆಯಲ್ಲಿ ಕೇಂದ್ರದ ಮಾಜಿ ಸಚಿವೆ ಈ ಅಂಶ ಪ್ರಸ್ತಾವಿಸಿದ್ದಾರೆ.
ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿ ರಾಜಕೀಯ ಸೇಡು ತೀರಿಸಿಕೊಳ್ಳಲಾಗುತ್ತಿದೆ. ಕೇಂದ್ರ ತನಿಖಾ ಸಂಸ್ಥೆ ಮಸೀದಿ ಧ್ವಂಸ ಪ್ರಕರಣದಲ್ಲಿ ತನ್ನ ವಿರುದ್ಧ ಸಾಕ್ಷ್ಯವಿದೆ ಎಂದಿರುವುದೇ ಸುಳ್ಳು ಎಂದು ದೂರಿದರು.
ತಾನು ರಾಮ ಭಕ್ತೆ ಎಂದು ಹೇಳಿಕೊಂಡ ಅವರು, ಭಕ್ತಿಯಿಂದ ಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡದ್ದಾಗಿ ತಿಳಿಸಿದರು.
ಬಿಜೆಪಿ ನಾಯಕರಾದ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ್ ಸಿಂಗ್ ಕೂಡಾ ಹೇಳಿಕೆ ದಾಖಲಿಸಬೇಕಾಗಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಎಂದು ವಕೀಲರು ವಿಶೇಷ ಕೋರ್ಟ್ ನ್ಯಾಯಾಧೀಶರಿಗೆ ಅರಿಕೆ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು