ಯಾರ ಮಗನೇ ಆಗಲಿ,ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ:ಪ್ರಧಾನಿ ಕಿಡಿ
ಬ್ಯಾಟ್ ಬೀಸಿದ ಬಿಜೆಪಿ ಶಾಸಕನ ವಿರುದ್ಧ ಸಂಸದೀಯ ಸಭೆಯಲ್ಲಿ ಕೆಂಡಾಮಂಡಲ...
Team Udayavani, Jul 2, 2019, 2:42 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಡೆದ ಸಂಸದೀಯ ಸಭೆಯಲ್ಲಿ ಆಕಾಶ್ ವಿಜಯವರ್ಗೀಯ ಅವರು ಬ್ಯಾಟ್ನಲ್ಲಿ ಅಧಿಕಾರಿಗೆ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿ ಕಿಡಿ ಕಾರಿದ್ದಾರೆ.
ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ, ಯಾರ ಮಗನೇ ಆಗಲಿ. ಈ ರೀತಿ ವರ್ತಿಸುವವರನ್ನು ಪಕ್ಷದಿಂದನಿರ್ದಾಕ್ಷಿಣ್ಯವಾಗಿ ಹೊರ ಹಾಕಿ ಎಂದು ಗುಡುಗಿದ್ದಾರೆ.
ಸಂಸದೀಯ ಸಭೆಯ ಬಳಿಕ ಬಿಜೆಪಿ ನಾಯಕ ರಾಜೀವ್ ಪ್ರತಾಪ್ ರೂಢಿ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಪ್ರಧಾನಿ ಮೋದಿ ಅವರು ಪಕ್ಷದ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಅಂತಹ ನಡವಳಿಕೆಯು ಸ್ವೀಕಾರಾರ್ಹವಲ್ಲ, ಯಾರೇ ಆಗಿರಲಿ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷಕ್ಕೆ ಕೆಟ್ಟ ಹೆಸರು ತರುವುದನ್ನು ಸಹಿಸುವುದಿಲ್ಲ.ಇದು ಎಲ್ಲರಿಗೂ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ ಎಂದರು.
ಬಿಜೆಪಿ ಹಿರಿಯ ನಾಯಕ ಕೈಲಾಷ್ ವಿಜಯವರ್ಗೀಯ ಅವರ ಪುತ್ರ ಮಧ್ಯಪ್ರದೇಶದ ಇಂಧೋರ್ನ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರು ಸಾರ್ವಜನಿಕರವಾಗಿ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಕ್ರಿಕೆಟ್ ಬ್ಯಾಟ್ನಿಂದ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿನಿಂದ ಹೊರ ಬಂದ ಅವರಿಗೆ ಸಂಭ್ರಮಾಚರಣೆಯ ಸ್ವಾಗತವೂ ದೊರಕಿತ್ತು. ಈ ಘಟನೆ ಬಿಜೆಪಿಗೆ ತೀವ್ರ ಮುಜುಗರವನ್ನು ತಂದಿಟ್ಟಿತ್ತು, ವಿಪಕ್ಷಗಳು ವ್ಯಾಪಕ ಟೀಕಾ ಪ್ರಹಾರವನ್ನು ನಡೆಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
ED; ದಿಲ್ಲಿ ಲಿಕ್ಕರ್ ಕೇಸ್ ಡೀಲ್ಗೆ ಕೆಸಿಆರ್ ಪುತ್ರಿ ಕವಿತಾ ಸಂಚು