ಮದ್ಯದ ವಿಚಾರದಲ್ಲಿ ಕಲಹ: ಪತ್ನಿ ಮಾತಿಗೆ ಮನನೊಂದು ಟಾಯ್ಲೆಟ್ ಕ್ಲೀನರ್ ಕುಡಿದು ಪತಿ ಮೃತ್ಯು
Team Udayavani, May 28, 2023, 11:48 AM IST
ಜೈಪುರ: ಮದ್ಯ ವ್ಯಸನಿಯೊಬ್ಬ ಟಾಯ್ಲೆಟ್ ಕ್ಲೀನರ್ ಕುಡಿದು ಮೃತಪಟ್ಟಿರುವ ಘಟನೆ ರಾಜಸ್ಥಾನದ ಭರತ್ಪುರ ಜಿಲ್ಲೆಯಲ್ಲಿ ನಡೆದಿದೆ.
ವ್ಯಕ್ತಿಯನ್ನು ಕುಮ್ಹೇರ್ ನಿವಾಸಿ ವಿನೋದ್ ಎಂದು ಗುರುತಿಸಲಾಗಿದೆ.
ವಿನೋದ್ ಪ್ರತಿನಿತ್ಯ ಮದ್ಯ ಕುಡಿದು ಮನೆಗೆ ಬರುತ್ತಿದ್ದ. ಪತಿಯ ಈ ನಶೆಯ ಹುಚ್ಚಿಗೆ ಬೇಸತ್ತ ಪತ್ನಿ, ನಿತ್ಯ ಜಗಳವಾಡುತ್ತಿದ್ದಳು. ದಂಪತಿಗಳ ನಡುವೆ ಪ್ರತಿನಿತ್ಯ ಕಲಹ ಉಂಟಾಗುತ್ತಿತ್ತು. ಪತ್ನಿಯ ಮಾತಿನಿಂದ ಸಿಟ್ಟಾಗಿ, ಮನನೊಂದಿದ್ದ ಪತಿ ವಿನೋದ್ ವಾಶ್ ರೂಮ್ ಗೆ ತೆರಳಿ, ಅಲ್ಲಿದ್ದ ಟಾಯ್ಲೆಟ್ ಕ್ಲೀನರ್ ಕುಡಿದಿದ್ದಾನೆ. ಬಳಿಕ ಅಸ್ವಸ್ಥಗೊಂಡು ಕಿರುಚಾಡಲು ಶುರು ಮಾಡಿದ್ದಾನೆ. ಈ ವೇಳೆ ವಿನೋದ್ ಸಹೋದರಿ ಬಂದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ವಿನೋದ್ ಆದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಕೂಡ ಆಸ್ಪತ್ರೆಗೆ ಆಗಮಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್ ಕಾರ್ಯಕಾರಿ ರಾಜಧಾನಿ
Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು
Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ