‘ಜಲಮಾತೆ’ಗಾಗಿ ‘ಜಲಶಕ್ತಿ’
2024ಕ್ಕೆ ಗ್ರಾಮೀಣ ಜನರಿಗೆ ನೀರು ಸಂಪರ್ಕ ಖಚಿತ
Team Udayavani, Jul 6, 2019, 5:00 AM IST
ಸಾಂದರ್ಭಿಕ ಚಿತ್ರ
ದೇಶದ ಪ್ರತಿಯೊಬ್ಬ ಪ್ರಜೆಗೂ ಅಗತ್ಯವಿರುವಷ್ಟು ಶುದ್ಧ ಕುಡಿಯುವ ನೀರು ಪೂರೈಸುವುದು ಕೇಂದ್ರ ಸರ್ಕಾರದ ಪ್ರಧಾನ ಆದ್ಯತೆ ಎಂದು ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ.
ಈ ನಿಟ್ಟಿನಲ್ಲಿ ಜಲಸಂಪನ್ಮೂಲ, ನದಿ ಅಭಿವೃದ್ಧಿ ಹಾಗೂ ಗಂಗಾ ನಿರ್ಮಲೀಕರಣ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯಗಳನ್ನು ಒಂದುಗೂಡಿಸಿ ‘ಜಲಶಕ್ತಿ’ ಸಚಿವಾಲಯ ಸ್ಥಾಪಿಸಲಾಗಿದೆ. ನೀರಿನ ಸಂಪನ್ಮೂಲದ ನಿರ್ವಹಣೆ ಹಾಗೂ ಸಮರ್ಪಕ ಬಳಕೆ ನಿಟ್ಟಿನಲ್ಲಿ ಈ ಸಚಿವಾಲಯ ಕಾರ್ಯ ನಿರ್ವಹಿಸಲಿದೆ. ಇದಕ್ಕಾಗಿ ಈ ಸಾಲಿನ ಬಜೆಟ್ನಲ್ಲಿ 28,261.59 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.
ಕುಡಿಯುವ ನೀರು ಮತ್ತು ನೈರ್ಮಲ್ಯಕರಣಕ್ಕಾಗಿ 20,016.34 ಕೋಟಿ ರೂ. ಮೀಸಲಿಡಲಾಗಿದೆ. 2018-19ರ ಬಜೆಟ್ನಲ್ಲಿ ಇದಕ್ಕಾಗಿ 19,992.97 ಕೋಟಿ ರೂ. ಮೀಸಲಿಡಲಾಗಿತ್ತು.
‘ಜಲಜೀವನ್ ಮಿಷನ್’ ಅಡಿ 2024ರೊಳಗೆ ದೇಶದ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸುವ ಮಹತ್ತರ ಗುರಿಯನ್ನು ಸಚಿವಾಲಯ ಹೊಂದಿದೆ. ಇದಕ್ಕಾಗಿ ಈ ಸಾಲಿನ ಬಜೆಟ್ನಲ್ಲಿ 7,750.36 ಕೋಟಿ ರೂ. ಮೀಸಲಿಡಲಾಗಿದೆ. ಕಳೆದ ಸಾಲಿನ ಬಜೆಟ್ನಲ್ಲಿ ಇದಕ್ಕಾಗಿ 5,391.32 ಕೋಟಿ ರೂ. ಮೀಸಲಿಡಲಾಗಿತ್ತು. ಜಲ ಸಂಪನ್ಮೂಲ ಮತ್ತು ಗಂಗಾ ಶುದ್ಧೀಕರಣಕ್ಕಾಗಿ 8,245.25 ಕೋಟಿ ರೂ. ಮೀಸಲಿಡಲಾಗಿದೆ. ಕಳೆದ ಬಾರಿ ಇದಕ್ಕಾಗಿ 7,269.25 ಕೋಟಿ ರೂ. ಮೀಸಲಿಡಲಾಗಿತ್ತು.
ಕುಡಿಯುವ ನೀರು ಪೂರೈಕೆ ಮತ್ತು ನಿರ್ಮಲಿಕರಣ, ಸ್ಥಳಿಯ ಮಟ್ಟದಲ್ಲಿ ನೀರು ಪೂರೈಸುವುದು, ನೀರು ಪೂರೈಕೆಗಾಗಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಮಳೆ ನೀರು ಕೊಯ್ಲು, ಅಂತರ್ಜಲ ವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ, ಕೃಷಿಗೆ ನೀರಿನ ಪುನರ್ಬಳಕೆ ಸೇರಿದಂತೆ ನೀರಿನ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದ ಕಾರ್ಯಕ್ರಮಗಳ ಅನುಷ್ಠಾನವನ್ನು ಈ ಯೋಜನೆಯಡಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?