ಆ.9ರ ಭಾರತ್ ಬಂದ್ಗೆ ಮುನ್ನ SC/ST ಮಸೂದೆಗೆ ಕೇಂದ್ರ ಸಂಪುಟ ಅಸ್ತು
Team Udayavani, Aug 1, 2018, 7:23 PM IST
ಹೊಸದಿಲ್ಲಿ : ಎಸ್ಸಿ/ಎಸ್ಟಿ ಕಾಯಿದೆಯ ಅನೇಕ ಅಂಶಗಳನ್ನು ಸುಪ್ರೀಂ ಕೋರ್ಟ್ ಸಡಿಲುಗೊಳಿಸಿದೆ ಎಂದು ಆರೋಪಿಸಿ ಹಲವಾರು ದಲಿತ ಸಂಘಟನೆಗಳು ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಕೆಲ ದಿನಗಳ ತರುವಾಯ ಕೇಂದ್ರ ಸಚಿವ ಸಂಪುಟ ಇಂದು ಬುಧವಾರ, ಎಸ್ಸಿ/ಎಸ್ಟಿ ಕಾಯಿದೆಯನ್ನು ಅದರ ಮೂಲ ರೂಪದಲ್ಲಿ ಪುನರ್ ಸ್ಥಾಪಿಸುವ ಉದ್ದೇಶದೊಂದಿಗೆ ಮಸೂದೆಯನ್ನು ಸಂಸತ್ತಿನಲ್ಲಿ ಪುನಃ ಮಂಡಿಸಲು ಒಪ್ಪಿಕೊಂಡಿತು. ಎಸ್ಸಿ/ಎಸ್ಟಿ ಸಂಘಟನೆಗಳು ಇದೇ ಆಗಸ್ಟ್ 9ರಂದು ಭಾರತ್ ಬಂದ್ ಗೆ ಕರೆ ನೀಡಿದ್ದವು.
ಸಂಸತ್ತಿನ ಹಾಲಿ ಮುಂಗಾರು ಅಧಿವೇಶನದಲ್ಲೇ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಮಸೂದೆಯನ್ನು ಮಂಡಿಸಲಾಗುವುದೆಂದು ಮೂಲಗಳನ್ನು ಉಲ್ಲೇಖೀಸಿ ಎಎನ್ಐ ವರದಿ ಮಾಡಿದೆ.
ಸರ್ವೋಚ್ಚ ನ್ಯಾಯಾಲಯ ಎಸ್ಸಿ/ಎಸ್ಟಿ ಕಾಯಿದೆಯ ಕಾಠಿನ್ಯವನ್ನು ಮೆದುಗೊಳಿಸಿರುವುದರ ವಿರುದ್ಧ ದೇಶ ವ್ಯಾಪಿ ಬಂದ್ಗೆ ಅನೇಕ ದಲಿತ ಸಂಘಟನೆಗಳು ಕರೆ ನೀಡಿರುವ ದಿನಗಳ ತರುವಾಯ ಕೇಂದ್ರ ಸಚಿವ ಸಂಪುಟ ಇಂದು ಬುಧವಾರ ಮಸೂದೆಯನ್ನು ಪುನರ್ ಮಂಡಿಸುವ ನಿರ್ಧಾರವನ್ನು ತೆಗೆದುಕೊಂಡಿತು.
ಸುಪ್ರೀಂ ಕೋರ್ಟ್ ಈ ವರ್ಷ ಮಾಚ್ನಲ್ಲಿ ನೀಡಿದ ತನ್ನ ತೀರ್ಪಿನಲ್ಲಿ ಎಸ್ಸಿ/ಎಸ್ಟಿ ಕಾಯಿದೆಯಲ್ಲಿ ಪರಿಚಯಿಸಿರುವ ಸುರಕ್ಷಾ ಅಂಶಗಳನ್ನು ಕಟುವಾಗಿ ಟೀಕಿಸಿರುವ ದಲಿತ ಸಂಘಟನೆಗಳು, ಸರ್ವೋಚ್ಚ ನ್ಯಾಯಾಲಯದ ಈ ತೀರ್ಪಿನಿಂದಾಗಿ ಎಸ್ಸಿ/ಎಸ್ಟಿ ಕಾಯಿದೆ ಬಲಹೀನವಾಗಿದೆ ಎಂದು ಆರೋಪಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ