ಮೇ 24 ಪ್ರಧಾನಿ ಮೋದಿ ಸಚಿವ ಸಂಪುಟ ಸಭೆ; 16ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು
Team Udayavani, May 23, 2019, 5:18 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಚಿವ ಸಂಪುಟ ಇದೇ ಶುಕ್ರವಾರ ಮೇ 24ರಂದು ಸಂಜೆ ಸಭೆ ಸೇರಿ 16ನೇ ಲೋಕಸಭೆಯ ವಿಸರ್ಜನೆಗೆ ಶಿಫಾರಸು ಮಾಡಲಿದೆ.
ಕೇಂದ್ರದಲ್ಲಿ ಎನ್ಡಿಎ ಮರಳಿ ಅಧಿಕಾರಕ್ಕೆ ಬರುವುದನ್ನು ಬಹುತೇಕ ಖಾತರಿಪಡಿಸಿರುವ ಇಂದು ಗುರುವಾರದ ಮತ ಎಣಿಕೆಯ ಪ್ರಕ್ರಿಯೆ ಸಂಪೂರ್ಣಗೊಳ್ಳುವ ಒಂದು ದಿನದ ತರುವಾಯ ಕೇಂದ್ರ ಸಚಿವ ಸಂಪುಟ ಶುಕ್ರವಾರದಂದು ಸಭೆ ಸೇರಲಿದೆ.
16ನೇ ಲೋಕಸಭೆಯನ್ನು ವಿಸರ್ಜಿಸುವ ಶಿಫಾರಸಿನ ಠರಾವನ್ನು ಸಂಪುಟವು ಕೈಗೊಂಡು ಅದನ್ನು ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರಿಗೆ ಸಲ್ಲಿಸಲಿದೆ. 16ನೇ ಲೋಕಸಭೆಯ ಅವಧಿಯು ಜೂನ್ 3ಕ್ಕೆ ಕೊನೆಗೊಳ್ಳುತ್ತದೆ.
ಅದೇ ದಿನ (ಜೂನ್ 3) 17ನೇ ಲೋಕಸಭೆಯನ್ನು ರೂಪಿಸಲಾಗುತ್ತದೆ. ಲೋಕಸಭೆಗೆ ಹೊಸದಾಗಿ ಚುನಾಯಿತರಾಗಿರುವವರ ಪಟ್ಟಿಯನ್ನು ಮೂವರು ಚುನಾವಣಾ ಆಯುಕ್ತರು ರಾಷ್ಟ್ರಪತಿಗೆ ಸಲ್ಲಿಸಿದ ಬಳಿಕದ ಕೆಲವೇ ದಿನಗಳಲ್ಲಿ 17ನೇ ಲೋಕಸಭೆ ರೂಪುಗೊಳ್ಳುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು