ಡ್ರಗ್ಸ್‌ ಜಾಲದ ವಿರುದ್ಧ ಕಠಿನ ಕ್ರಮ: ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ ಎಚ್ಚರಿಕೆ


Team Udayavani, Dec 22, 2022, 1:45 AM IST

ಡ್ರಗ್ಸ್‌ ಜಾಲದ ವಿರುದ್ಧ ಕಠಿನ ಕ್ರಮ: ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ ಎಚ್ಚರಿಕೆ

ಹೊಸದಿಲ್ಲಿ: ದೇಶದಲ್ಲಿ ಮಾದಕ ವಸ್ತುಗಳ ಪೂರೈಕೆ ಜಾಲದ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಲೋಕಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಡ್ರಗ್ಸ್‌ ಮಾರಾಟದಿಂದ ಬರುವ ಹಣ ದೇಶದ ಅರ್ಥ ವ್ಯವಸ್ಥೆಯನ್ನು ಹಾಳು ಮಾಡುತ್ತದೆ. ಈ ಪಿಡುಗು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜತೆಗೂಡಿ ನಾರ್ಕೋ ಕೋ- ಆರ್ಡಿನೇಶನ್‌ ಸೆಂಟರ್‌ ಅನ್ನು ಸ್ಥಾಪಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಡ್ರಗ್ಸ್‌ ಜಾಲವನ್ನು ಮಟ್ಟ ಹಾಕಬೇಕಾಗಿದೆ ಎಂದರು.

“ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ ಮಾದಕ ದ್ರವ್ಯ ಜಾಲವನ್ನು ನಾವು ತಿಳಿದುಕೊಂಡಿದ್ದೇವೆ. ಅದರಲ್ಲಿ ತೊಡಗಿಸಿ ಕೊಂಡಿರುವ ವ್ಯಕ್ತಿ ಎಷ್ಟೇ ದೊಡ್ಡವನಿರಲಿ, ಮುಂದಿನ ಎರಡು ವರ್ಷಗಳಲ್ಲಿ ಅಂಥ ಜಾಲವನ್ನು ಮುನ್ನಡೆಸುವವರನ್ನು ಜೈಲಿಗೆ ಹಾಕಲಾಗುತ್ತದೆ’ ಎಂದು ಹೇಳಿದ್ದಾರೆ. 2014ರಿಂದ 2022ರ ಅವಧಿಯಲ್ಲಿ 97 ಸಾವಿರ ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ನಾಶ ಮಾಡಲಾಗಿದೆ. 2006 ಮತ್ತು 2013ರ ನಡುವೆ 23 ಸಾವಿರ ಕೋಟಿ ರೂ.ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು ಎಂದರು.

ಕೋಪಗೊಂಡ ಅಮಿತ್‌ ಶಾ: ಅಮಿತ್‌ ಶಾ ಮಾತನಾಡುತ್ತಿದ್ದ ವೇಳೆ, ಟಿಎಂಸಿ ಸಂಸದ ಸುಗತ ರಾಯ್‌ ಪದೇ ಪದೆ ಅಡ್ಡಿಪಡಿಸುತ್ತಿದ್ದರು. ಈ ಸಂದರ್ಭದಲ್ಲಿ ಕೋಪಗೊಂಡ ಶಾ “ಒಂದೋ ನೀವು ಮಾತನಾಡಿ. ಇಲ್ಲದಿದ್ದರೆ ನೀವೇ ಮಾತು ಮುಂದುವರಿಸಿ’ ಎಂದರು. ಹಿರಿಯರಾಗಿರುವ ನೀವು ಈ ರೀತಿ ವರ್ತಿಸಬಾರದು ಎಂದರು.

ಒಬಿಸಿಗಳಿಗೆ ಇರಲಿ ಅವಕಾಶ; ಸಮಿತಿ: ಬಿಎಸ್‌ಎನ್‌ಎಲ್‌, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಕೆನರಾ ಬ್ಯಾಂಕ್‌, ಭಾರತೀಯ ನೈಸರ್ಗಿಕ ಅನಿಲ ನಿಗಮ ನಿಯಮಿತ (ಗೈಲ್‌), ಮಹಾನಗರ ಟೆಲಿಫೋನ್‌ ನಿಗಮ್‌ ಲಿಮಿಟೆಡ್‌ಗಳ ಉನ್ನತ ಆಡಳಿತ ಮಂಡಳಿಯಲ್ಲಿ ಇತರ ಹಿಂದುಳಿದ ವರ್ಗ (ಒಬಿಸಿ)ದವರಿಗೆ ಪ್ರಾತಿನಿಧ್ಯ ಇರುವಂತೆ ನೋಡಿಕೊಳ್ಳಿ. ಹೀಗೆಂದು ಸಂಸತ್‌ನ ಸಮಿತಿ ತನ್ನ ವರದಿಯಲ್ಲಿ ಶಿಫಾರಸು ಮಾಡಿದೆ. ಸದ್ಯ ಒಬಿಸಿಯವರಿಗೆ ಪ್ರಾತಿನಿಧ್ಯ ಇಲ್ಲ ಎಂಬುದನ್ನೂ ಬೆಟ್ಟು ಮಾಡಿ ತೋರಿಸಿದೆ.

ಕಾಂಗ್ರೆಸ್‌ ಸಭೆ: ಈ ನಡುವೆ ಕಾಂಗ್ರೆಸ್‌ ಸಂಸದೀಯ ಮಂಡಳಿ ಸಭೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಂಸತ್‌ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸೋನಿಯಾ ಉದ್ದೇಶಪೂರ್ವಕವಾಗಿಯೇ ಸರಕಾರ ಸಂಸತ್‌ನಲ್ಲಿ ಚೀನ ವಿಚಾರ ಚರ್ಚೆಗೆ ಮುಂದಾಗುತ್ತಿಲ್ಲ ಎಂದು ದೂರಿದರು.

ಸುಸ್ತಿದಾರರ ಪಟ್ಟಿಯಲ್ಲಿ ಚೋಸ್ಕಿ ಮೊದಲು
2022ರ ಮಾ. 31ರ ವರೆಗಿನ ಮಾಹಿತಿ ಪ್ರಕಾರ ಟಾಪ್‌ 50 ಉದ್ದೇಶ ಪೂರ್ವಕ ಸುಸ್ತಿದಾರರು ಬ್ಯಾಂಕ್‌ಗಳಿಗೆ 92,570 ಕೋಟಿ ರೂ. ವಂಚಿಸಿ ದ್ದಾರೆ ಎಂದು ಕೇಂದ್ರ ಸರಕಾರ ಸಂಸತ್‌ಗೆ ಮಾಹಿತಿ ನೀಡಿದೆ. ಈ ಬಗ್ಗೆ ಲೋಕಸಭೆಗೆ ಲಿಖೀತ ಉತ್ತರ ನೀಡಿದ ಹಣಕಾಸು ಖಾತೆ ಸಹಾಯಕ ಸಚಿವ ಭಾಗವತ್‌ ಕರಾಡ್‌, ಮೆಹುಲ್‌ ಚೋಸ್ಕಿ ಒಡೆತನದ ಗೀತಂಜಲಿ ಜೆಮ್ಸ್‌ ಅತ್ಯಧಿಕ ಎಂದರೆ 7,848 ಕೋಟಿ ರೂ. ವಂಚಿಸಿ ಬ್ಯಾಂಕ್‌ಗಳಿಗೆ ಸಾಲ ವಾಪಸ್‌ ಮಾಡಿಲ್ಲ ಎಂದು ಹೇಳಿದ್ದಾರೆ.

ಖರ್ಗೆ ನೇತೃತ್ವದಲ್ಲಿ ಪ್ರತಿಭಟನೆ
ತವಾಂಗ್‌ನಲ್ಲಿ ಚೀನ ಸೈನಿಕರು ನಡೆಸಿದ ದಾಳಿ ಮತ್ತು ದೇಶದ ಭದ್ರತೆಗೆ ಸಂಬಂಧಿಸಿದಂತೆ ಸಂಸತ್‌ನಲ್ಲಿ ಕೇಂದ್ರ ಸರಕಾರ ಚರ್ಚೆಗೆ ಅವಕಾಶ ಮಾಡಿಕೊಡುತ್ತಿಲ್ಲವೆಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಂಸತ್‌ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದ ಚಿದಂಬರಂ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಡಿಎಂಕೆ ನಾಯಕ ಟಿ.ಆರ್‌. ಬಾಲು, ಎನ್‌ಸಿಪಿಯ ಸುಪ್ರಿಯಾ ಸುಳೆ ಸಹಿತ ವಿಪಕ್ಷಗಳ ಪ್ರಮುಖ ನಾಯಕರು ಇದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.