ಸಿಎಎ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ವಿಶ್ವಸಂಸ್ಥೆ ಮಾನವ ಹಕ್ಕು ಮುಖ್ಯಸ್ಥೆ
Team Udayavani, Mar 3, 2020, 3:34 PM IST
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥರು ಸುಪ್ರೀಂ ಕೋರ್ಟಿನ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಈ ಕುರಿತಾಗಿ ಸರ್ವೋಚ್ಛ ನ್ಯಾಯಾಲಯದಲ್ಲಿ ಹಸ್ತಕ್ಷೇಪ ಅರ್ಜಿಯೊಂದನ್ನು ಸಲ್ಲಿಸಲು ಸಿದ್ಧತೆಗಳು ನಡೆದಿವೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಶ್ವಸಂಸ್ಥೆಯಲ್ಲಿರುವ ಮಾನವ ಹಕ್ಕುಗಳ ಹೈ ಕಮಿಷನರ್ ಮಿಶೆಲ್ ಬಶೆಲೆಟ್ ಅವರು ಈ ಹಸ್ತಕ್ಷೇಪ ಅರ್ಜಿಯನ್ನು ಸಲ್ಲಿಸುವ ಕುರಿತಾಗಿ ಜೆನೇವಾದಲ್ಲಿರುವ ಭಾರತದ ಪರ್ಮನೆಂಟ್ ಮಿಷನ್ ಗೆ ಮಾಹಿತಿ ನೀಡಲಾಗಿದೆ ಎಂಬ ವಿಚಾರವನ್ನು ವಿದೇಶಾಂಗ ವ್ಯವಹಾರಗಳ ಇಲಾಖೆಯ ವಕ್ತಾರ ರವೀಶ್ ಕುಮಾರ್ ಅವರು ತಿಳಿಸಿದ್ದಾರೆ.
ಆದರೆ, ‘ಸಿಎಎ ಸಂಪೂರ್ಣವಾಗಿ ಭಾರತದ ಆಂತರಿಕ ವಿಚಾರವಾಗಿದೆ ಹಾಗೂ ದೇಶಕ್ಕೆ ಅಗತ್ಯವಾಗಿರುವ ಕಾನೂನುಗಳನ್ನು ರೂಪಿಸಿಕೊಳ್ಳುವುದು ನಮ್ಮ ಸಂಸತ್ತಿನ ಸರ್ವೋಚ್ಛ ಹಕ್ಕಾಗಿದೆ ಮತ್ತು ಭಾರತದ ಸಾರ್ವಭೌಮತೆಗೆ ಸಂಬಂಧಿಸಿದ ವಿಚಾರದಲ್ಲಿ ಯಾವುದೇ ವಿದೇಶಿ ವ್ಯಕ್ತಿಗಳು ನ್ಯಾಯಾಲಯದಲ್ಲಿ ಅರ್ಜಿಸಲ್ಲಿಸುವುದಿಲ್ಲ ಎಂದು ನಾವು ಬಲವಾಗಿ ನಂಬಿದ್ದೇವೆ’ ಎಂದು ರವೀಶ್ ಕುಮಾರ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಕಳೆದ ವಾರವಷ್ಟೇ ಮಿಶೆಲ್ ಬಶೆಲೆಟ್ ಅವರು ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ದೆಹಲಿಯಲ್ಲಿ ಉಂಟಾಗಿದ್ದ ದಂಗೆಯ ಕುರಿತಾಗಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದರು ಹಾಗೂ ಸರಕಾರ ಮಧ್ಯಪ್ರವೇಶಿಸಿ ಇನ್ನಷ್ಟು ಹಿಂಸಾಚಾರಗಳುಂಟಾಗುವುದನ್ನು ತಡೆಯಬೇಕು ಎಂದು ಅವರು ಭಾರತ ಸರಕಾರವನ್ನು ಒತ್ತಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ