ಉನ್ನಾವೊ ಘಟನೆ; ಭಗವಾನ್ ರಾಮನಿಂದಲೂ ಶೇ.100ರಷ್ಟು ಅಪರಾಧ ಮುಕ್ತ ರಾಜ್ಯ ಮಾಡಲು ಆಗಲ್ಲ!
Team Udayavani, Dec 5, 2019, 7:18 PM IST
ಲಕ್ನೋ: ಒಂದು ವೇಳೆ ಭಗವಾನ್ ರಾಮ ಇದ್ದರೂ ಕೂಡಾ ಇಂದಿನ ಪರಿಸ್ಥಿತಿಯಲ್ಲಿ ರಾಜ್ಯವನ್ನು ಶೇ.100ರಷ್ಟು ಅಪರಾಧ ಮುಕ್ತ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ರವೀಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ. ಉನ್ನಾವೊದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆಯ ಮೇಲೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಆರೋಪಿಗಳು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ಬಳಿಕ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
ಯೋಗಿ ಆದಿತ್ಯನಾಥ್ ಆಡಳಿತಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಸುಧಾರಣೆಯಾಗಿದೆ. ಅಲ್ಲದೇ ಆರೋಪಿಗಳಿಗೆ ರಾಜಕೀಯ ಆಶ್ರಯ ಕೂಡಾ ಸಿಗುತ್ತಿಲ್ಲ. ಇನ್ನು ಉನ್ನಾವೋ ಪ್ರಕರಣದಲ್ಲಿ ಹೇಳುವುದಾದರೆ, ಒಂದು ವೇಳೆ ಭಗವಾನ್ ರಾಮ ಇದ್ದರೂ ಕೂಡಾ ಈ ಸಮಾಜವನ್ನು ಶೇ.100ರಷ್ಟು ಅಪರಾಧ ಮುಕ್ತ ಮಾಡಲು ಸಾಧ್ಯವಿಲ್ಲ. ಆದರೆ ಒಂದು ವೇಳೆ ಅಪರಾಧ ಕೃತ್ಯ ಎಸಗಿದ್ದೇ ಹೌದಾದಲ್ಲಿ, ಆರೋಪಿಗಳು ಜೈಲು ಸೇರುವುದು ಖಚಿತ ಎಂದು ತಿಳಿಸಿದರು.
ಉತ್ತರಪ್ರದೇಶದಲ್ಲಿ ಪ್ರಸ್ತುತ ವಾತಾವರಣ ಯಾವುದೇ ಹೆದರಿಕೆ ಇಲ್ಲದೆ ಇರಬಹುದಾಗಿದೆ ಎಂದು ಈ ಸಂದರ್ಭದಲ್ಲಿ ಶಾಸಕ ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ