ಜಿನ್‌ಪಿಂಗ್‌ಗೆ ತೀವ್ರ ಮುಖಭಂಗ; ಭಾರತದ ಮೇಲೆ ಚೀನಾದಿಂದ ದೊಡ್ಡ ದಾಳಿಗೆ ಸಿದ್ಧತೆ?

ನ್ಯೂಸ್‌ವೀಕ್‌'ನಲ್ಲಿ ಪ್ರಕಟವಾಗಿರುವ ತಮ್ಮ ಲೇಖನದಲ್ಲಿ ಗಾರ್ಡನ್‌ ಜಿ. ಚಾಂಗ್‌ ಎಂಬ ತಜ್ಞರು ಅಂದಾಜಿಸಿದ್ದಾರೆ.

Team Udayavani, Sep 15, 2020, 10:25 AM IST

ಜಿನ್‌ಪಿಂಗ್‌ಗೆ ತೀವ್ರ ಮುಖಭಂಗ; ಭಾರತದ ಮೇಲೆ ಚೀನಾದಿಂದ ದೊಡ್ಡ ದಾಳಿ?

ನವದೆಹಲಿ: ಲಡಾಖ್‌ ಬಳಿಯಿರುವ ಭಾರತ -ಚೀನಾ ಗಡಿ ಪ್ರದೇಶದಲ್ಲಿ ಭಾರತಕ್ಕೆ ಸೇರಿದ ಭೂಭಾಗಗಳನ್ನು ಅತಿಕ್ರಮಿಸಲುಅನೇಕ ಬಾರಿ ಪ್ರಯತ್ನಿಸಿ ಮಣ್ಣುಮುಕ್ಕಿರುವ ಚೀನಾ, ಭಾರ ತದ ಮೇಲೆ ದೊಡ್ಡ ಮಟ್ಟದ ಆಕ್ರಮಣ ನಡೆಸ ಬಹುದು ಎಂಬ ಅಭಿಪ್ರಾಯಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂಡಿವೆ.

ಜೂನ್‌ನಲ್ಲಿ ಗಾಲ್ವಾನ್‌ನಲ್ಲಿ, ಭಾರತೀಯ ಯೋಧರ ಮೇಲೆ ಚೀನಾ ಸೈನಿಕರು ಹಠಾತ್‌ ದಾಳಿ ನಡೆಸಿದ್ದರು. ಆಗ, 20 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅಂದು ಭಾರತೀಯ ಯೋಧರು ನೀಡಿದ ತಿರುಗೇಟಿಗೆ 60ಕ್ಕೂ ಹೆಚ್ಚು ಚೀನಾ ಯೋಧರು ಅಸು ನೀಗಿದ್ದರು. ಇತ್ತೀಚೆಗೆ, ಸೆ.8ರಂದುಲಡಾಖ್‌ನ ಪಾಂಗಾಂಗ್‌ ಸರೋವರದ ಫಿಂಗರ್‌ 3 ಪ್ರಾಂತ್ಯದಲ್ಲಿ ಚೀನಾ ಸೈನಿಕರು, ಭಾರತಕ್ಕೆ ಸೇರಿದ ಕೆಲ ಪ್ರದೇಶಗಳನ್ನು ಆಕ್ರಮಿಸಲು 2 ಬಾರಿ ಯತ್ನಿಸಿದ್ದಾಗ ಭಾರತೀಯ ಯೋಧರು ಅವರನ್ನು ಹಿಮ್ಮೆಟ್ಟಿಸಿದ್ದರು.

ಇಂಥ ಸತತ ಹಿನ್ನಡೆಗಳು ಚೀನಾ ಸೇನೆಯ ಈ ವೈಫ‌ಲ್ಯಗಳು ಸೇನೆಯ ಮುಖ್ಯಸ್ಥರೂ ಆಗಿರುವ ಚೀನಾದ ಅಧ್ಯಕ್ಷಕ್ಸಿ ಜಿನ್‌ಪಿಂಗ್‌ ಅವರಿಗೆ ತೀವ್ರ ಮುಖಭಂಗ ಉಂಟು ಮಾಡಿವೆ. ರಾಜಕೀಯ ವಲಯ ಮಾತ್ರವಲ್ಲ, ಸೇನೆಯೊಳಗೇ ತಾವು ನಗೆಪಾಟಲಿಗೆ ಈಡಾಗಿರುವುದರಿಂದ ಅವರು ಭಾರತದ ಮೇಲೆ ಮತ್ತೂಂದು ಸುತ್ತಿನ ದಾಳಿ ನಡೆಸಲು ಷಡ್ಯಂತ್ರ ರೂಪಿಸಬಹುದು ಎಂದು “ನ್ಯೂಸ್‌ವೀಕ್‌’ನಲ್ಲಿ ಪ್ರಕಟವಾಗಿರುವ ತಮ್ಮ ಲೇಖನದಲ್ಲಿ ಗಾರ್ಡನ್‌ ಜಿ. ಚಾಂಗ್‌ ಎಂಬ ತಜ್ಞರು ಅಂದಾಜಿಸಿದ್ದಾರೆ.

ರಾಜತಾಂತ್ರಿಕ ಷಡ್ಯಂತ್ರ:ಮತ್ತೂಂದೆಡೆ, ತನ್ನ
ಮಹತ್ವಾಕಾಂಕ್ಷೆಯ ಬೆಲ್ಟ್ ಆ್ಯಂಡ್‌ ರೋಡ್‌ ಇನಿಶಿಯೇಟಿವ್‌ (ಬಿಆರ್‌ಐ) ಯೋಜನೆಯ ಸುಗಮ ಅನುಷ್ಠಾನಕ್ಕಾಗಿ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ತನ್ನ ರಾಯಭಾರಿಗಳನ್ನು ಚೀನಾ ಬದಲಿಸಲು ಕ್ರಮ ಕೈಗೊಂಡಿದೆ. ಜಿನ್‌ ಪಿಂಗ್‌ ಅವರ ಆಪ್ತರನ್ನೇ ರಾಯಭಾರಿಗಳನ್ನಾಗಿಸಿ ಬಿಆರ್‌ಐ ಯೋಜನೆಗೆ ಆ ರಾಷ್ಟ್ರಗಳು ಅನುವು ಮಾಡಿಕೊಡಲು ಬೇಕಾದ ಲಾಬಿಗಳನ್ನು ನಡೆಸಲು ಚೀನಾ ತಂತ್ರಗಾರಿಕೆ ರೂಪಿಸಿದೆ. ಈ ಯೋಜನೆ ವಿರೋಧಿಸಿರುವ ಭಾರತವನ್ನು ಈ ವಿಚಾರದಲ್ಲಿ ಏಕಾಂಗಿಯಾಗಿಸಲು ಈ ಪ್ರಯತ್ನಕ್ಕೆ ಚೀನಾ ಕೈ ಹಾಕಿದೆ.

ಚೀನಾದಿಂದ ಒಎಫ್ ಕೇಬಲ್‌ ಅಳವಡಿಕೆ:
ಭಾರತ-ಚೀನಾ ನೈಜ ಗಡಿ ರೇಖೆ ಬಳಿಯಿರುವ ಪಾಂಗಾಂಗ್‌ ಸರೋವರದ ದಕ್ಷಿಣ ಭಾಗದಲ್ಲಿಚೀನಾ ಸರ್ಕಾರ,ಆಪ್ಟಿಕಲ್‌ ಫೈಬರ್‌ ಕೇಬಲ್‌ಗ‌ಳನ್ನು ಹಾಕಲು ಸಿದ್ಧತೆ ನಡೆಸಿದೆ ಎಂದು ಭಾರತ ಹೇಳಿದೆ. ಗಡಿ ರೇಖೆಯ ಸಮೀಪದಲ್ಲಿರುವ ಚೀನಾ ಸೇನೆ, ಗಡಿ ರೇಖೆ ಗಿಂತ ತುಂಬಾ ಹಿಂದೆ ಇರುವ ತನ್ನ ಸೇನಾ ನೆಲೆ ಗಳಿಗೆ ತ್ವರಿತ್ವ ‌ವಾಗಿ ಸಂದೇಶಗಳನ್ನು ರವಾನಿಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕೇಬಲ್‌ಗ‌ಳನ್ನು ಹಾಕುತ್ತಿದೆ ಎಂದಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.