ನೃತ್ಯ ಮಾಡುತ್ತಲೇ ಗಣೇಶೋತ್ಸವ ವೇದಿಕೆಯಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ ಹನುಮಂತ ಪಾತ್ರಧಾರಿ
Team Udayavani, Sep 4, 2022, 1:27 PM IST
ಉತ್ತರ ಪ್ರದೇಶ : ಗಣೇಶೋತ್ಸವ ಕಾರ್ಯಕ್ರಮದಲ್ಲಿ ಹನುಮಂತ ವೇಷಧಾರಿಯೊಬ್ಬರು ಪ್ರದರ್ಶನ ನೀಡುತ್ತಿದ್ದ ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಉತ್ತರ ಪ್ರದೇಶದ ಮಣಿಪುರಿಯಲ್ಲಿ ಕಲಾವಿದರೊಬ್ಬರು ಹನುಮಂತನ ವೇಷ ಧರಿಸಿ ನೃತ್ಯ ಮಾಡುತ್ತಿದ್ದ ವೇಳೆ ಕುಸಿದು ಸಾವನ್ನಪ್ಪಿದ್ದಾರೆ. ಮೃತರನ್ನು ರವಿ ಶರ್ಮಾ ಎಂದು ಗುರುತಿಸಲಾಗಿದೆ.
ಮಣಿಪುರದ ಕೊತ್ವಾಲಿ ಪ್ರದೇಶದ ಶಿವ ದೇವಾಲಯದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮಕ್ಕೆ ರವಿ ಶರ್ಮಾ ಅವರು ಭಜನಾ ತಂಡದಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಹನುಮಂತನ ವೇಷ ಧರಿಸಿ ನೃತ್ಯ ಮಾಡುತ್ತಿದ್ದರು ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಶರ್ಮಾ ಅವರನ್ನು ಮಣಿಪುರದ ಸರ್ಕಾರೀ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೋತ್ತಿಗಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.
ಇದನ್ನೂ ಓದಿ : ನೇಣು ಬಿಗಿದ ಸ್ಥಿತಿಯಲ್ಲಿ 14 ವರ್ಷದ ಬಾಲಕಿಯ ಶವ ಪತ್ತೆ : ಬೆಚ್ಚಿ ಬೀಳಿಸಿತು ವೈದ್ಯಕೀಯ ವರದಿ