ಕೌಂಟ್ ಡೌನ್; ಯುಪಿಯಲ್ಲಿ ಬಿಜೆಪಿಗೆ ಬಹುಮತ, ಸಿಎಂ ಪಟ್ಟ ಯಾರಿಗೆ


Team Udayavani, Mar 10, 2017, 6:19 PM IST

up-election-2017.jpg

ಲಕ್ನೋ:ಪಂಚರಾಜ್ಯಗಳ ಮತಗಟ್ಟೆ ಸಮೀಕ್ಷೆ ಈಗಾಗಲೇ ಹೊರಬಿದ್ದಾಗಿದೆ. ಶನಿವಾರ ಎಲ್ಲಾ ಅಭ್ಯರ್ಥಿಗಳ ಭವಿಷ್ಯ ಬಯಲಾಗಲಿದೆ. ಏತನ್ಮಧ್ಯೆ ಐದು ರಾಜ್ಯಗಳ ಚುನಾವಣೆಯಲ್ಲಿ ಯಾರು ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಲೆಕ್ಕಚಾರ, ಬೆಟ್ಟಿಂಗ್ ಮುಂದುವರಿದಿದೆ. ಇವೆಲ್ಲದಕ್ಕೂ ನಾಳೆ ತೆರೆ ಬೀಳಲಿದೆ.

ಚುನಾವಣಾ ಫಲಿತಾಂಶ ಪ್ರಕಟವಾಗಲು ಕ್ಷಣಗಣನೆ ಆರಂಭವಾಗಿದೆ. ಮತಗಟ್ಟೆ ಸಮೀಕ್ಷೆಯ ಪ್ರಕಾರ ಉತ್ತರಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಲಿದೆ ಎಂಬ ಭವಿಷ್ಯವಾಣಿ ಹೊರಬಿದ್ದಿದೆ.

ಇಂಡಿಯಾ ಟುಡೇ, ಆಕ್ಸಿಸ್, ಮೈ ಇಂಡಿಯಾ ಮತಗಟ್ಟೆ ಸಮೀಕ್ಷೆ ಪ್ರಕಾರ ಬಿಜೆಪಿ 251ರಿಂದ 279 ಸ್ಥಾನ ಪಡೆಯುವ ಸಾಧ್ಯತೆ ಇರುವುದಾಗಿ ತಿಳಿಸಿದೆ. ಎಸ್ಪಿ, ಕಾಂಗ್ರೆಸ್ ಮೈತ್ರಿಕೂಟ 88-112 ಹಾಗೂ ಮಾಯಾವತಿಯ ಬಹುಜನ ಸಮಾಜವಾದಿ ಪಕ್ಷ 28-42 ಸ್ಥಾನ ಪಡೆಯುವುದಾಗಿ ಹೇಳಿದೆ.

ಮತಗಟ್ಟೆ ಸಮೀಕ್ಷೆ ಪ್ರಕಾರ ಬಿಜೆಪಿ ಸುಮಾರು 15 ವರ್ಷಗಳ ಬಳಿಕ ಉತ್ತರಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವ ಲೆಕ್ಕಚಾರದಲ್ಲಿ ತೊಡಗಿದೆ, ಜೊತೆಗೆ ಮುಂದಿನ ಸಿಎಂ ಅಭ್ಯರ್ಥಿ ಯಾರಾಗಬಹುದು ಎಂಬ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿದೆ.

ಕೇಶವ ಪ್ರಸಾದ್ ಮೌರ್ಯ:
ಯುಪಿ ಬಿಜೆಪಿ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ, ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿ ಎನ್ನಲಾಗಿದೆ. 47 ವರ್ಷದ ಮೌರ್ಯ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಂಡ ವ್ಯಕ್ತಿಯಲ್ಲ. ತಳಮಟ್ಟದಲ್ಲಿ ಬಿಜೆಪಿಯನ್ನು ಗಟ್ಟಿಗೊಳಿಸಿ, ಗೆಲುವಿನ ಹಾದಿಯತ್ತ ಕೊಂಡೊಯ್ಯಲು ಮೌರ್ಯ ಕಠಿಣ ಶ್ರಮವಹಿಸಿರುವುದಾಗಿ ಮೂಲಗಳು ತಿಳಿಸಿವೆ.

ಮೌರ್ಯ ಸಿಎಂ ಅಭ್ಯರ್ಥಿಯಾಗಿಸುವ ಹಲವು ಲೆಕ್ಕಚಾರ ಬಿಜೆಪಿಗಿದೆ,ಯುಪಿಯಲ್ಲಿ ಕಲ್ಯಾಣ್ ಸಿಂಗ್ ಅವರನ್ನು ನಿರ್ಲಕ್ಷಿಸಿದ ಮೇಲೆ ಹಿಂದುಳಿದ ವರ್ಗಗಳ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿಗೆ ಆ ಸ್ಥಾನ ತುಂಬುವ ವ್ಯಕ್ತಿ ಬೇಕಾಗಿದ್ದಾರೆ. ಅದಕ್ಕಾಗಿ ಮೌರ್ಯ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ತಳ್ಳಿಹಾಕುವಂತಿಲ್ಲ ಎಂದು ವರದಿ ವಿವರಿಸಿದೆ.

ರಾಜನಾಥ ಸಿಂಗ್:
ಕೇಂದ್ರದ ಹಾಲಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಉತ್ತರಪ್ರದೇಶದ ಬಿಜೆಪಿಯ ಕೊನೆಯ ಸಿಎಂ ಆಗಿದ್ದರು. 2000&2002ರವರೆಗೆ ಸಿಂಗ್ ಅವರು ಉತ್ತರಪ್ರದೇಶದ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. ಗಾಜಿಯಾಬಾದ್ ಸಂಸದರಾಗಿರುವ ಸಿಂಗ್ ಅವರು ಈ ಬಾರಿ ಉತ್ತರಪ್ರದೇಶದಲ್ಲಿ ಸುಮಾರು 120 ಚುನಾವಣಾ ರಾಲಿಗಳಲ್ಲಿ ಭಾಗವಹಿಸಿ ಭಾಷಣ ಮಾಡಿದ್ದರು. ಈ ಹಿಂದೆ ಸಿಎಂ ಆಗಿ ಅನುಭವ ಇರುವ ಹಿನ್ನೆಲೆಯಲ್ಲಿ ಯುಪಿ ಸಿಎಂ ಅಭ್ಯರ್ಥಿಯ ರೇಸ್ ನಲ್ಲಿ ಸಿಂಗ್ ಅವರ ಹೆಸರೂ ಮುಂಚೂಣಿಯಲ್ಲಿದೆ.

ಮನೋಜ್ ಸಿನ್ನಾ:
ಗಾಜಿಪುರ್ ಲೋಕಸಭಾ ಕ್ಷೇತ್ರದ ಸಂಸದ ಮನೋಜ್ ಸಿನ್ನಾ ಹೆಸರೂ ಕೂಡಾ ಸಿಎಂ ರೇಸ್ ನಲ್ಲಿ ಓಡಾಡುತ್ತಿದೆ. ಬನಾರಸ್ ಹಿಂದೂ ಯೂನಿರ್ವಸಿಟಿಯಲ್ಲಿ ಐಐಟಿ ಹಾಗೂ ಬಿಟೆಕ್, ಎಂಟೆಕ್ ಪದವಿ ಗಳಿಸಿರುವ ಸಿನ್ನಾ ಯುಪಿ ಚುನಾವಣೆಯಲ್ಲಿ ಕಠಿಣ ಪರಿಶ್ರಮ ವಹಿಸಿ ದುಡಿದವರಲ್ಲಿ ಇವರು ಒಬ್ಬರಾಗಿದ್ದಾರೆ. 

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.