16 ವರ್ಷದ ನಂಬಿಕೆಗೆ ಬ್ರೇಕ್! ಸರ್ಕ್ಯೂಟ್ ಹೌಸ್ ನಲ್ಲಿ ತಂಗಿದ ಯೋಗಿ
Team Udayavani, Jan 16, 2018, 4:58 PM IST
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗ್ರಾದ ಸರ್ಕ್ಯೂಟ್ ಹೌಸ್ ನಲ್ಲಿ ರಾತ್ರಿ ಕಳೆಯುವ ಮೂಲಕ ಸುಮಾರು 16 ವರ್ಷಗಳ ಸಂಪ್ರದಾಯವನ್ನು ಮುರಿದಿದ್ದಾರಂತೆ!
ಹೌದು ಕಳೆದ 16 ವರ್ಷಗಳಿಂದ ಯಾವುದೇ ರಾಜ್ಯದ ಮುಖ್ಯಮಂತ್ರಿಗಳು ಆಗ್ರಾದ ಸರ್ಕ್ಯೂಟ್ ಹೌಸ್ ನಲ್ಲಿ ಮಲಗುವ ಸಾಹಸಕ್ಕೆ ಕೈಹಾಕಿಲ್ಲ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಅಧಿಕಾರ ಕಳೆದುಕೊಳ್ಳುವ ಭಯ!
ಕರ್ನಾಟಕದ ಚಾಮರಾಜನಗರಕ್ಕೆ ಮುಖ್ಯಮಂತ್ರಿಯಾದವರು ಭೇಟಿ ನೀಡಿದರೆ ಆರು ತಿಂಗಳೊಳಗೆ ಅಧಿಕಾರ ಕಳೆದುಕೊಳ್ಳುತ್ತಾರೆಂಬ ನಂಬಿಕೆ ಇತ್ತು, ಸಿಎಂ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಹಲವು ಬಾರಿ ಭೇಟಿ ನೀಡುವ ಮೂಲಕ ಸಂಪ್ರದಾಯ ಮುರಿದಿದ್ದರು.
ಅದೇ ರೀತಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಆಗ್ರಾ ಸರ್ಕ್ಯೂಟ್ ಹೌಸ್ ನಲ್ಲಿ ರಾತ್ರಿ ಕಳೆದಿದ್ದಾರೆ. ಈ ಸರ್ಕ್ಯೂಟ್ ಹೌಸ್ ನಲ್ಲಿ ಸುಮಾರು 16 ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗಿದ್ದ ರಾಜನಾಥ್ ಸಿಂಗ್ ಅವರು ತಂಗಿದ್ದ ಕೊನೆಯ ಸಿಎಂ.
ಹೀಗೆ ಸರ್ಕ್ಯೂಟ್ ಹೌಸ್ ನಲ್ಲಿ ತಂಗಿದ್ದ ರಾಜನಾಥ್ ಸಿಂಗ್ ಅವರು ನಂತರ ಸಿಎಂ ಗದ್ದುಗೆಯಿಂದ ಕೆಳಗಿಳಿದಿದ್ದರು. ಅದಾದ ನಂತರ ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಯಾದವ್ ಆಗಲಿ, ಮಾಯಾವತಿ, ಅಖಿಲೇಶ್ ಯಾದವ್ ಕೂಡಾ ಸರ್ಕ್ಯೂಟ್ ಹೌಸ್ ನಲ್ಲಿ ತಂಗುವ ಧೈರ್ಯ ತೋರಿಲ್ಲ ಎಂದು ವರದಿ ವಿವರಿಸಿದೆ.
ಭಾರತದ ಪ್ರವಾಸದಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದಂಪತಿಯನ್ನು ಆಗ್ರಾದಲ್ಲಿ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಯೋಗಿ ಅವರು ಆಗ್ರಾ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ