Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ಒಂದು ತಿಂಗಳೊಳಗೆ ತನಿಖೆ ವರದಿ ನೀಡಲು ಆದೇಶ
Team Udayavani, Mar 29, 2024, 5:11 PM IST
ಲಖನೌ: ದರೋಡೆಕೋರ-ರಾಜಕಾರಣಿ ಮುಕ್ತಾರ್ ಅನ್ಸಾರಿ ಸಾವಿನ ಪ್ರಕರಣದ ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶದ ಬಂದಾ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂದಾ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ಭಗವಾನ್ ದಾಸ್ ಗುಪ್ತಾ ಅವರು ಪ್ರಕರಣದ ತನಿಖಾಧಿಕಾರಿಯಾಗಿ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (MP-MLA ಕೋರ್ಟ್ ಬಂದಾ) ಗರಿಮಾ ಸಿಂಗ್ ಅವರನ್ನು ನೇಮಿಸಿದ್ದು, ಒಂದು ತಿಂಗಳೊಳಗೆ ತನಿಖೆ ವರದಿ ನೀಡುವಂತೆ ಹೇಳಿದ್ದಾರೆ.
68ಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದ ಐದು ಬಾರಿಯ ಶಾಸಕ, ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿ ಗುರುವಾರ ನಿಧನ ಹೊಂದಿದ್ದು, ವಿಷ ಪ್ರಾಶನ ಮಾಡಲಾಗಿದೆ ಎಂದು ಅವರ ಪುತ್ರ ಆರೋಪಿಸಿದ್ದಾರೆ.
8 ಪ್ರಕರಣಗಳಲ್ಲಿ ದೋಷಿ ಎಂದು ಸಾಬೀತಾಗಿ 2005 ರಿಂದಲೂ ಜೈಲಲ್ಲಿದ್ದ ಅನ್ಸಾರಿ, ಗುರುವಾರ ಸಂಜೆ ರಂಜಾನ್ ಉಪವಾಸ ಮುರಿಯುತ್ತಿದ್ದಂತೆ ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಹೃದಯಾಘಾತದಿಂದ ಕೊನೆಯುಸಿರೆಳೆದರು. ಮಂಗಳವಾರವಷ್ಟೇ ಕಿಬ್ಬೊಟ್ಟೆ ನೋವಿನ ಕಾರಣ 14 ಗಂಟೆ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!