ವಿವಾಹ ವಿಚ್ಛೇದನ: ಪ್ರತಿ ತಿಂಗಳು ಪತ್ನಿಯೇ ಪತಿಗೆ ಜೀವನಾಂಶ ಕೊಡಬೇಕು: ಕೋರ್ಟ್ ಆದೇಶ!
ಕಿಶೋರಿ ಲಾಲ್ ಸೋಹಾನ್ಕರ್ ಮುಜಾಫರ್ ನಗರದ ಖಾಟೌಲಿ ನಗರದಲ್ಲಿ ಚಹಾ ಅಂಗಡಿ ಇಟ್ಟುಕೊಂಡಿದ್ದರು.
Team Udayavani, Oct 23, 2020, 6:25 PM IST
Representative Image
ನವದೆಹಲಿ:ಪತ್ನಿಗೆ ಜೀವನಾಂಶ ಕೊಡುವಂತೆ ಕೋರ್ಟ್ ಆದೇಶ ನೀಡುವ ಸುದ್ದಿ ಎಲ್ಲರಿಗೂ ತಿಳಿದಿದೆ. ಆದರೆ ಉತ್ತರಪ್ರದೇಶದ ಮುಜಾಫರ್ ನಗರದ ಜಿಲ್ಲಾ ಕೋರ್ಟ್ ವಿಚ್ಛೇದನಗೊಂಡ ಪತಿಗೆ ಪತ್ನಿಯೇ ಪ್ರತಿ ತಿಂಗಳು ಜೀವನಾಂಶ ನೀಡಬೇಕೆಂದು ಆದೇಶ ನೀಡಿದೆ ಎಂದು ವರದಿ ತಿಳಿಸಿದೆ.
ಸ್ವಂತ ಚಹಾ ಅಂಗಡಿ ನಡೆಸುತ್ತಿದ್ದ 62ವರ್ಷದ ಕಿಶೋರಿ ಲಾಲ್ ಸೋಹಾನ್ಕರ್ ಅವರಿಗೆ ಖಾಯಂ ಆಗಿ ಯಾವುದೇ ಆದಾಯದ ಮೂಲಗಳಿಲ್ಲ. ಈ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಸೇನೆಯ ಕೆಲಸದಿಂದ ನಿವೃತ್ತಿಯಾಗಿರುವ ಪತ್ನಿ ಮುನ್ನಿ ದೇವಿ(58ವರ್ಷ) ಪತ್ರಿ ತಿಂಗಳು ಪತಿ(ವಿಚ್ಛೇದಿತ)ಗೆ 2000 ಸಾವಿರ ರೂಪಾಯಿ ಜೀವನಾಂಶ ಕೊಡುವಂತೆ ಕೋರ್ಟ್ ಆದೇಶ ನೀಡಿದೆ.
ಕಿಶೋರಿ ಲಾಲ್ ಸೋಹಾನ್ಕರ್ ಮುಜಾಫರ್ ನಗರದ ಖಾಟೌಲಿ ನಗರದಲ್ಲಿ ಚಹಾ ಅಂಗಡಿ ಇಟ್ಟುಕೊಂಡಿದ್ದರು. ಇವರ ಮಾಜಿ ಪತ್ನಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದು, ಇತ್ತೀಚೆಗೆ ನಿವೃತ್ತಿಯಾಗಿದ್ದರು. ಮುನ್ನಿ ದೇವಿಗೆ ತಿಂಗಳಿಗೆ 12 ಸಾವಿರ ರೂಪಾಯಿ ನಿವೃತ್ತಿ ವೇತನ ಬರುತ್ತಿತ್ತು.
ಇದನ್ನೂ ಓದಿ:ಐಫೋನ್-12 ಹಾಗೂ ಐಫೋನ್-12 ಪ್ರೋ ಮುಂಗಡ ಖರೀದಿ ಆರಂಭ: ಬೆಲೆ, ವಿಶೇಷತೆಗಳ ಮಾಹಿತಿ ಇಲ್ಲಿದೆ
ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಪತಿ ಕಿಶೋರಿ ಲಾಲ್ ಸೋಹಾನ್ಕಾರ್, ಪ್ರಾಥಮಿಕವಾಗಿ ಕೌಟುಂಬಿಕ ನ್ಯಾಯಾಲಯದಲ್ಲಿ ತನ್ನ ಪತ್ನಿಯನ್ನು ಮನೆಗೆ ಕರೆದೊಯ್ಯಲು ನಿರ್ದೇಶನ ನೀಡಬೇಕೆಂದು ಕೋರಿ ಮನವಿ ಸಲ್ಲಿಸಿದ್ದರು.
ಆದರೆ ಪತ್ನಿ ಮುನ್ನಿ ದೇವಿ ಕಿಶೋರಿ ಲಾಲ್ ಜತೆ ವಾಸವಾಗಿರಲು ನಿರಾಕರಿಸಿದ್ದರು. ನಂತರ ಕಿಶೋರಿ ಲಾಲ್ ತನಗೆ ಪ್ರತಿ ತಿಂಗಳು ಜೀವನಾಂಶದ ಅಗತ್ಯವಿದೆ ಎಂದು ಕೋರ್ಟ್ ಮೆಟ್ಟಿಲೇರಿರುವುದಾಗಿ ವಕೀಲ ಬಿಕೆ ತಾಯಾಲ್ ತಿಳಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ