Crime: ದಿನ ರೀಲ್ಸ್ ಮಾಡುತ್ತಿದ್ದಕ್ಕೆ ಪತ್ನಿ,ಮಗುವನ್ನು ಕೊಂದು ದರೋಡೆ ಕಥೆ ಕಟ್ಟಿದ ಪತಿ
Team Udayavani, Jan 9, 2024, 1:09 PM IST
ಲಕ್ನೋ: ವ್ಯಕ್ತಿಯೊಬ್ಬ ತನ್ನ ಪತಿ, ಮಗುವನ್ನು ಕೊಂದು ದರೋಡೆಯ ನಾಟಕವಾಡಿ, ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಲಲಿತ್ ಪುರದಲಿ ನಡೆದಿದೆ.
ಆರೋಪಿಯನ್ನು ನೀರಜ್ ಕುಶ್ವಾಹ ಎಂದು ಗುರುತಿಸಲಾಗಿದ್ದು, ಲಲಿತ್ಪುರದ ಸದರ್ ಕೊಟ್ವಾಲಿ ಪ್ರದೇಶದ ಚಂದಮಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಘಟನೆ ವಿವರ:
ರಾತ್ರಿ 1.30ರ ವೇಳೆಗೆ 6 ಮಂದಿ ದುಷ್ಕರ್ಮಿಗಳು ನುಗ್ಗಿ ಪತ್ನಿ ಹಾಗೂ ಮಗಳನ್ನು ಕೊಂದು ನನ್ನ ಬಾಯಿಗೆ ಸಾಕ್ಸ್ ತುರುಕಿ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರಿಗೆ ನೀರಜ್ ಕುಶ್ವಾಹ ಮಾಹಿತಿ ಕೊಟ್ಟಿದ್ದಾರೆ. ಗಾಯದಿಂದ ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆದರೆ ಪೊಲೀಸರು ನೀರಜ್ ಅವರ ಮಾತುಗಳನ್ನು ನಂಬದೆ, ಆತನಲ್ಲೇ ಮತ್ತಷ್ಟು ಮಾಹಿತಿಯನ್ನು ಕೇಳಿ ವಿಚಾರಿಸಿದ್ದಾರೆ. ತೀವ್ರ ವಿಚಾರಣೆ ವೇಳೆ ಘಟನೆಯ ಬಗ್ಗತೆ ಸತ್ಯ ಬಾಯಿ ಬಿಟ್ಟಿದ್ದಾನೆ.
ಆಕೆ ಸುಂದರವಾಗಿದ್ದಳು.. ಆದರೆ ಇಡೀ ದಿನ ರೀಲ್ಸ್ ಮಾಡುತ್ತಿದ್ದಳು.. ವಿಚಾರಣೆ ವೇಳೆ ಪೊಲೀಸರಲ್ಲಿ ತಾನೇ ತನ್ನ 22 ವರ್ಷದ ಪತ್ನಿ ಹಾಗೂ 1 ವರ್ಷದ ಮಗುವನ್ನು ಕೊಲೆಗೈದಿದ್ದಾನೆ ಎನ್ನುವ ವಿಚಾರವನ್ನು ಹೇಳಿದ್ದಾನೆ.
“ನನ್ನ ಪತ್ನಿ ಸುಂದರವಾಗಿದ್ದಳು, ಆದರೆ ಆಕೆ ಇಡೀ ದಿನ ರೀಲ್ಸ್ ಮಾಡುತ್ತಿದ್ದಳು. ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತಿಗಳ ಜೊತೆ ಮಾತನಾಡುತ್ತಿದ್ದಳು. ಆಕೆಯನ್ನು ನಾನು ಬಿಡುವ ಯೋಚನೆಯಲ್ಲಿದ್ದೆ. ಆಕೆಯನ್ನು ಬಿಟ್ಟು ಅತ್ತಿಗೆಯನ್ನು ಮದುವೆ ಆಗುವವನಿದ್ದೆ. ಆದರೆ ಇದಕ್ಕೆ ಪತ್ನಿ ಒಪ್ಪಿಗೆ ನೀಡಿಲ್ಲ. ಈ ಕಾರಣದಿಂದ ನಾನು ಆಕೆ ಹಾಗೂ ಮಗಳನ್ನು ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದೆ” ಎಂದು ಪೊಲೀಸರ ಮುಂದೆ ನೀರಜ್ ಹೇಳಿದ್ದಾನೆ.
ಆರೋಪಿಯು ದರೋಡೆ ಆಗಿದೆ ಎನ್ನುವುದನ್ನು ಸಾಬೀತು ಮಾಡಲು ತಾನೇ ಮನೆಯ ಚಿನ್ನಾಭರಣಗಳನ್ನು ತೆಗೆದಿಟ್ಟು, ಮನೆಯ ಸಾಮಾಗ್ರಿಗಳನ್ನು ಆಚೆ ಇಚೆ ಮಾಡಿದ್ದಾನೆ. ಇದಲ್ಲದೆ ನಕಲಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ