ಉತ್ತರಪ್ರದೇಶ:ಕಚೇರಿಗೆ ಹಾಜರಾಗದೇ 6 ತಿಂಗಳಿಂದ ಸಂಬಳ ಪಡೆಯುತ್ತಿದ್ದ ಮಹಿಳಾ ಅಧಿಕಾರಿ ಅಮಾನತು
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಒ ಸಂಜಯ್ ಅಗರ್ವಾಲ್ ಅವರು ಇಲಾಖಾ ತನಿಖೆಗೆ ಆದೇಶ ನೀಡಿದ್ದರು.
Team Udayavani, Sep 30, 2022, 2:49 PM IST
Representative Image Text
ಲಕ್ನೋ: ಕಳೆದ ಆರು ತಿಂಗಳಿಂದ ಕಚೇರಿಗೆ ಹಾಜರಾಗದೇ ಸಂಬಳ ಪಡೆಯುತ್ತಿದ್ದ ಆಮ್ರೋಹ ಜಿಲ್ಲೆಯಲ್ಲಿ ನಿಯೋಜನೆಗೊಂಡಿದ್ದ ಡೆಪ್ಯುಟಿ ಸಿಎಂಒ(ಚೀಫ್ ಮೆಡಿಕಲ್ ಆಫೀಸರ್) ಡಾ.ಇಂದೂ ಬಾಲಾ ಶರ್ಮಾ ಅವರನ್ನು ಉತ್ತರಪ್ರದೇಶ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಅಮಾನತುಗೊಳಿಸಿ ಆದೇಶ ಹೊರಡಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ಅಧಿಕಾರಿ ಇಂದೂ ಬಾಲಾ ಶರ್ಮ ಎಂಬಾಕೆ ಕಳೆದ ಆರು ತಿಂಗಳಿನಿಂದ ಕಚೇರಿಗೆ ಹಾಜರಾಗದೇ ಹಾಜರಾತಿ ಪುಸ್ತಕದಲ್ಲಿ ನಕಲಿ ಸಹಿ ಹಾಕಿ ಸಂಬಳ ಪಡೆಯುತ್ತಿದ್ದರು ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಒ ಸಂಜಯ್ ಅಗರ್ವಾಲ್ ಅವರು ಇಲಾಖಾ ತನಿಖೆಗೆ ಆದೇಶ ನೀಡಿದ್ದರು.
ಇದಲ್ಲದೇ ವೇತನ ನೀಡುವ ಉಸ್ತುವಾರಿ ಹೊತ್ತಿದ್ದ ಸಂತೋಷ್ ಕುಮಾರ್ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕೆಂದು ಆದೇಶದಲ್ಲಿ ತಿಳಿಸಲಾಗಿತ್ತು. ಈ ಪ್ರಕರಣದಲ್ಲಿ ಶಾಮೀಲಾದ ಎಲ್ಲಾ ಉದ್ಯೋಗಿಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಲು ಎಫ್ ಐಆರ್ ದಾಖಲಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿತ್ತು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು