ಉ.ಪ್ರ.: ಮಾ.10ರಂದೇ ಹೋಳಿ; ಬಿಜೆಪಿಗೆ ಬಹುಮತ ಖಚಿತ – ಪ್ರಧಾನಿ ಮೋದಿ ವಿಶ್ವಾಸ


Team Udayavani, Feb 18, 2022, 7:00 AM IST

ಉ.ಪ್ರ.: ಮಾ.10ರಂದೇ ಹೋಳಿ; ಬಿಜೆಪಿಗೆ ಬಹುಮತ ಖಚಿತ –  ಪ್ರಧಾನಿ ಮೋದಿ ವಿಶ್ವಾಸ

ಹೊಸದಿಲ್ಲಿ: “ಈ ವರ್ಷ ಮಾ.18ರ ಬದಲಾಗಿ ಮಾ.10­ರಂದೇ ಹೋಳಿ ಹಬ್ಬ ಆಚರಿಸಲು ಉತ್ತರಪ್ರದೇಶದ ಜನತೆ ನಿರ್ಧರಿಸಿಯಾಗಿದೆ. ಮತ ಎಣಿಕೆಯ ದಿನದಂದು ಬಿಜೆಪಿಯ ವಿಜಯೋತ್ಸವ­ದೊಂದಿಗೆ ಹಬ್ಬ ಆಚರಿಸಲು ಜನ ಸಿದ್ಧರಾಗಿದ್ದಾರೆ’.

ಉತ್ತರಪ್ರದೇಶದ ಫ‌ತೇಪುರದ ರ್ಯಾಲಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಆಡಿರುವ ವಿಶ್ವಾಸದ ನುಡಿಗಳಿವು. ಗುರುವಾರ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, “ಮುಂದಿನ 5 ಹಂತಗಳ ಫ‌ಲಿತಾಂಶವೇನೆಂದು ನಿಮ್ಮ ಆಸಕ್ತಿಯನ್ನು ನೋಡಿದರೇ ತಿಳಿಯುತ್ತದೆ. ರಾಜ್ಯದಲ್ಲಿ ಬಿಜೆಪಿ­ಯನ್ನು ಬೆಂಬಲಿಸುವವರ ಸಂಖ್ಯೆಯೂ ಹೆಚ್ಚಳ­ವಾಗಿದೆ’ ಎಂದಿದ್ದಾರೆ.

ವಿಪಕ್ಷಗಳ ವಿರುದ್ಧ ಕಿಡಿ­ಕಾರಿದ ಅವರು, “ಬಿಜೆಪಿ ಸರಕಾರವು ಇಡೀ ದೇಶಕ್ಕೆ ಉಚಿತ ಲಸಿಕೆ ನೀಡುತ್ತಿದೆ. ಆದರೆ ಈ ಪರಿವಾರವಾದಿ ಗಳು ಅದನ್ನು ಬಿಜೆಪಿಯ ಲಸಿಕೆ ಎನ್ನುತ್ತಾರೆ. ದೇಶಕ್ಕೆ ಏನೇ ಒಳ್ಳೆಯದು ಮಾಡಿದರೂ ಅವರು ಅದನ್ನು ಪ್ರಶ್ನೆ ಮಾಡುತ್ತಾರೆ’ ಎಂದಿದ್ದಾರೆ. ಇದೇ ವೇಳೆ, ಪಂಜಾಬ್‌ನ ಅಬೋಹಾರ್‌ನಲ್ಲಿ ಗುರುವಾರ ನಡೆದ ಪ್ರಚಾರ ರ್ಯಾಲಿಯಲ್ಲಿ ಮೋದಿ ಅವರು ಸಿಎಂ ಚನ್ನಿ ಅವರ “ಭಯ್ನಾಸ್‌’ ಎಂಬ ವಿವಾದಿತ ಹೇಳಿಕೆ ಕುರಿತೂ ಪ್ರಸ್ತಾಪಿಸಿದ್ದಾರೆ. “ಚನ್ನಿ ಅವರು ಭಯ್ನಾಸ್‌ ಎಂದು ಕರೆಯುವಾಗ ದಿಲ್ಲಿಯ ಕುಟುಂಬವೊಂದರ ಕುಡಿಯು ಚಪ್ಪಾಳೆ ತಟ್ಟುತ್ತಿತ್ತು’ ಎಂದು ಪ್ರಿಯಾಂಕಾ ವಾದ್ರಾರನ್ನು ಪರೋಕ್ಷವಾಗಿ ಕುಟುಕಿದ್ದಾರೆ.

ಮುಲಾಯಂ ಪ್ರಚಾರ: ಪ್ರಸಕ್ತ ಚುನಾವಣೆಯಲ್ಲಿ ಎಸ್‌ಪಿ ವರಿಷ್ಠ ಮುಲಾಯಂ ಸಿಂಗ್‌ ಯಾದವ್‌  ಇದೇ ಮೊದಲ ಬಾರಿಗೆ ಗುರುವಾರ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕರ್ಹಾಲ್‌ ಕ್ಷೇತ್ರದಲ್ಲಿ ಸ್ಪರ್ಧಿಸಿ­ರುವ ಪುತ್ರ ಅಖೀಲೇಶ್‌ ಯಾದವ್‌ ಪರವಾಗಿ ಅವರು ಪ್ರಚಾರ ನಡೆಸಿದ್ದಾರೆ.

ಉಚಿತ ಸ್ಕೂಟರ್‌, 100 ಕೋಟಿ ಸ್ಟಾರ್ಟ್‌ ಆಪ್‌ ನಿಧಿ :

ಮಣಿಪುರದಲ್ಲಿ ಗುರುವಾರ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ  ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟರ್‌, ಹಿರಿಯ ನಾಗರಿಕರಿಗೆ 1,000 ರೂ.ಗಳ ಮಾಸಿಕ ಪಿಂಚಣಿ, 100 ಕೋಟಿ ರೂ.ಗಳ ಸ್ಟಾರ್ಟ್‌ ಆಪ್‌ ನಿಧಿ ಸ್ಥಾಪಿಸುವುದಾಗಿ ಘೋಷಿಸಲಾಗಿದೆ.

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.