ಚುನಾವಣೆ ಬಳಿಕ ಬಜೆಟ್ ಮಂಡಿಸಿ: ಪ್ರಧಾನಿ ಮೋದಿಗೆ ಅಖಿಲೇಶ್ ಪತ್ರ
Team Udayavani, Jan 27, 2017, 12:25 PM IST
ಹೊಸದಿಲ್ಲಿ : ಪಂಚ ರಾಜ್ಯಗಳ ಚುನಾವಣೆ ಬಳಿಕವೇ ಬಜೆಟ್ ಮಂಡಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಪಂಚ ರಾಜ್ಯ ಚುನಾವಣೆಗೆ ಮೊದಲು ಬಜೆಟ್ ಮಂಡಿಸಿದಲ್ಲಿ ಈ ರಾಜ್ಯಗಳಿಗೆ ಅನುಕೂಲ ಉಂಟಾಗಬಲ್ಲ ಯೋಜನೆಗಳು ತಪ್ಪಿಹೋಗಬಹುದು; ಮತ್ತು ಈ ರಾಜ್ಯಗಳ ಜನರಿಗೆ ಅಂತಹ ಉತ್ತಮ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ಅಖೀಲೇಶ್ ಯಾದವ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.
ಫೆ.1ರಂದು ಮಂಡಿಸಲ್ಪಡುವ ಕೇಂದ್ರ ಬಜೆಟ್ ವೇಳಾ ಪಟ್ಟಿಯಲ್ಲಿ ತಾನು ಹಸ್ತಕ್ಷೇಪ ನಡೆಸೆನೆಂದು ಸುಪ್ರೀಂ ಕೋರ್ಟ್ ಈಗಾಗಲೇ ಸ್ಪಷ್ಟಪಡಿಸಿದೆ.
ಇದಕ್ಕೆ ಮೊದಲು ಚುನಾವಣಾ ಆಯೋಗವು, ಪಂಚ ರಾಜ್ಯ ಚುನಾವಣೆಗೆ ಮುನ್ನ ಮಂಡಿಸಲ್ಪಡುವ ಕೇಂದ್ರ ಬಜೆಟ್ನಲ್ಲಿ ಆ ಐದು ರಾಜ್ಯಗಳಿಗೆ ಸಂಬಂಧಿಸಿದಂತೆ ಯಾವುದೇ ವಿಶೇಷ ಯೋಜನೆಗಳನ್ನು ಘೋಷಿಸಕೂಡದು ಎನ್ನುವ ನಿರ್ಬಂಧವನ್ನು ಸರಕಾರಕ್ಕೆ ವಿಧಿಸಿದೆ.
ಕಾಂಗ್ರೆಸ್ ಮಾತ್ರವಲ್ಲದೆ ಇನ್ನೂ ಅನೇಕ ಪಕ್ಷಗಳು ಪಂಚ ರಾಜ್ಯ ಚುನಾವಣೆಯ ಬಳಿಕವೇ ಬಜೆಟ್ ಮಂಡಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ