ತಲಾಖ್ ಸಂತ್ರಸ್ತರಿಗೆ 6 ಸಾವಿರ ಪರಿಹಾರ
ಉ.ಪ್ರ. ಸಿಎಂ ಯೋಗಿ ಘೋಷಣೆ
Team Udayavani, Sep 26, 2019, 5:45 AM IST
ಲಕ್ನೋ: ತ್ರಿವಳಿ ತಲಾಖ್ ಸಂತ್ರಸ್ತರಿಗೆ ಪುನಶ್ಚೇತನ ವ್ಯವಸ್ಥೆ ಕಲ್ಪಿಸುವವರೆಗೂ ವಾರ್ಷಿಕ 6 ಸಾವಿರ ರೂ. ಪರಿಹಾರ ಧನವನ್ನಾಗಿ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಪ್ರಕಟಿಸಿದ್ದಾರೆ. ಅಲ್ಲದೆ, ಇಂತಹ ಸಂತ್ರಸ್ತರ ದೂರಿನ ವಿಚಾರದಲ್ಲಿ ಪೊಲೀಸರು ಕ್ರಮ ತೆಗೆದುಕೊಳ್ಳದೇ ಇದ್ದರೆ, ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಸಂತ್ರಸ್ತರಿಗೆ ಉಚಿತವಾಗಿ ಕಾನೂನು ಸೇವೆಯನ್ನೂ ಒದಗಿಸ ಲಾಗುತ್ತದೆ ಎಂದರು ತ್ರಿವಳಿ ತಲಾಖ್ ಸಂತ್ರಸ್ತ ಮಹಿಳೆಯರೊಂದಿಗೆ ಪ್ರಧಾನ ಮಂತ್ರಿ ಜನವಿಕಾಸ ಕಾರ್ಯಕ್ರಮದಲ್ಲಿ ಸಿಎಂ ಯೋಗಿ ಆದಿತ್ಯನಾಥ ಸಂವಾದ ನಡೆಸಿದರು.
ಸುಶಿಕ್ಷಿತ ಮಹಿಳೆಯರಿಗೆ ಅವರ ಅರ್ಹತೆಗೆ ತಕ್ಕಂತೆ ಸರ್ಕಾರಿ ಉದ್ಯೋಗವನ್ನು ಒದಗಿಸಲಾಗುತ್ತದೆ ಮತ್ತು ಇತರ ಮಹಿಳೆಯರಿಗೆ ವಸತಿ ಹಾಗೂ ಶಿಕ್ಷಣವನ್ನು ವಿವಿಧ ಯೋಜನೆಗಳ ಅಡಿಯಲ್ಲಿ ಒದಗಿಸಲಾಗುತ್ತದೆ. ಈ ಮಹಿಳೆಯರಿಗೆ ಆಯುಷ್ಮಾನ್ ಭಾರತ್ ಯೋಜನೆ ಅಥವಾ ಮುಖ್ಯಮಂತ್ರಿಗಳ ಆರೋಗ್ಯ ಯೋಜನೆ ಅಡಿಯಲ್ಲಿ ವಿಮೆ ಒದಗಿಸಲಾಗುತ್ತದೆ ಎಂದಿದ್ದಾರೆ. ಅಷ್ಟೇ ಅಲ್ಲ, ಈ ಮಹಿಳೆಯರಿಗೆ ಕಲ್ಯಾಣ ಯೋಜನೆಗಳನ್ನು ರೂಪಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸುಮಾರು 300 ಸಂತ್ರಸ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?