ಗೋಮೂತ್ರದಿಂದ 8 ಔಷಧ ಯುಪಿ ಸರ್ಕಾರದ ಸಾಧನೆ


Team Udayavani, Feb 5, 2018, 6:00 AM IST

COW-0502018.jpg

ಲಕ್ನೋ: ಸಿಎಂ ಯೋಗಿ ಆದಿತ್ಯನಾಥ್‌ ಅವರು ಅಧಿಕಾರಕ್ಕೆ ಬಂದಾಗಿನಿಂದಲೂ ಗೋಮೂತ್ರದ ಔಷಧೀಯ ಗುಣಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿರುವ ಉತ್ತರಪ್ರದೇಶ ಸರ್ಕಾರ, ಇದೀಗ ಗೋಮೂತ್ರದಿಂದಲೇ ಔಷಧಗಳ ತಯಾರಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ. ರಾಜ್ಯ ಸರ್ಕಾರದ ಆಯುರ್ವೇದ ಇಲಾಖೆಯು, ಗೋಮೂತ್ರದಿಂದ 8 ಔಷಧಗಳನ್ನು ಅಭಿವೃದ್ಧಿಪಡಿಸಿದೆ.

ಯಕೃತ್ತು ಸಮಸ್ಯೆ, ಕೀಲು ನೋವು ಮತ್ತು ರೋಗ ನಿರೋಧಕ ಶಕ್ತಿ ಕಡಿಮೆಯಿರುವವರಿಗೆ ಸಹಾಯಕವಾಗುವಂಥ ಔಷಧಗಳಿವು ಎಂದು ಇಲಾಖೆಯ ನಿರ್ದೇಶಕ ಡಾ. ಆರ್‌.ಆರ್‌.ಚೌಧರಿ ಹೇಳಿದ್ದಾರೆ. ಆಯುರ್ವೇದ ಇಲಾಖೆಯು ಲಕ್ನೋ ಮತ್ತು ಪಿಲಿಭಿತ್‌ನಲ್ಲಿ ಎರಡು ಫಾರ್ಮಸಿಗಳು ಹಾಗೂ ಕೆಲವು ಖಾಸಗಿ ಘಟಕಗಳನ್ನು ಹೊಂದಿದ್ದು, ಗೋಮೂತ್ರ, ಗೋವಿನ ಹಾಲು ಹಾಗೂ ತುಪ್ಪದಿಂದ ವಿವಿಧ ರೀತಿಯ ಔಷಧಗಳ ತಯಾರಿಕೆಯಲ್ಲಿ ತೊಡಗಿಕೊಂಡಿವೆ.

ಗೋಮೂತ್ರ ಎನ್ನುವುದು ಆಯುರ್ವೇದದ ಅವಿಭಾಜ್ಯ ಅಂಗವಾಗಿದೆ. ಹೊಸ ಸಂಶೋಧನೆಗಳು ಕೂಡ ಗೋಮೂತ್ರದ ಪ್ರಯೋಜನಗಳನ್ನು ಒಪ್ಪಿಕೊಂಡಿವೆ. ನಾವೀಗ 8 ಔಷಧಗಳನ್ನು ತಯಾರಿಸಿದ್ದೇವೆ. ಈ ಔಷಧಗಳ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಿ, ಬೇರೆ ಬೇರೆ ರೋಗಗಳ ಶಮನಕ್ಕೆ ಅನುಕೂಲವಾಗುವಂತೆ ಮಾಡುವುದು ನಮ್ಮ ಉದ್ದೇಶ ಎಂದೂ ಹೇಳಿದ್ದಾರೆ ಚೌಧರಿ.

ಸ್ನಾತಕೋತ್ತರ ಪದವಿ ಆರಂಭಕ್ಕೆ ಸಿದ್ಧತೆ: ರಾಜ್ಯದ ವಿವಿಧೆಡೆ 8 ಆಯುರ್ವೇದಿಕ್‌ ವೈದ್ಯಕೀಯ ಕಾಲೇಜುಗಳಿದ್ದು, ಇಲ್ಲಿ ಆಯುರ್ವೇದಿಕ್‌ ಔಷಧಗಳ ಕುರಿತು ಪದವಿ ಕೋರ್ಸ್‌ಗಳನ್ನು ಆರಂಭಿಸಲಾಗಿದೆ. ಇದರ ಜತೆಗೆ, ಈ ಕಾಲೇಜುಗಳಿಗೆ ಪ್ರತಿದಿನ ಸಾವಿರಾರು ರೋಗಿಗಳು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆಯುರ್ವೇದ ಇಲಾಖೆಯು ರಾಜ್ಯಾದ್ಯಂತ ಹೊಸ ಫಾರ್ಮಸಿಗಳನ್ನು ಹಾಗೂ ಆಯುರ್ವೇದಿಕ್‌ ಮೆಡಿಕಲ್‌ ಕಾಲೇಜುಗಳಲ್ಲಿ ಸ್ನಾತಕೋತ್ತರ ಮತ್ತು ಎಂಡಿ ಕೋರ್ಸ್‌ಗಳನ್ನು ಆರಂಭಿಸಲು ನಿರ್ಧರಿಸಿದೆ ಎಂದೂ ಚೌಧರಿ ಮಾಹಿತಿ ನೀಡಿದ್ದಾರೆ.

ಕಳೆದ ವರ್ಷದ ಆಗಸ್ಟ್‌ನಲ್ಲಿ ಯೋಗಿ ಸರ್ಕಾರವು, ನೆಲವನ್ನು ಸ್ವತ್ಛಗೊಳಿಸುವಂತ ದ್ರಾವಣಕ್ಕೆ ಗೋಮೂತ್ರವನ್ನು ಬಳಸುವಂತೆ ಸಲಹೆ ನೀಡಿತ್ತು. 2017ರ ಜುಲೈನಲ್ಲಿ ಕೇಂದ್ರ ಸರ್ಕಾರವು ಆರೆಸ್ಸೆಸ್‌, ವಿಎಚ್‌ಪಿ ಸಂಘಟನೆಯ  ಮೂವರು ಸೇರಿದಂತೆ 19 ಮಂದಿ ಸದಸ್ಯರುಳ್ಳ ಸಮಿತಿಯೊಂದನ್ನು ರಚಿಸಿತ್ತು. ಗೋಮೂತ್ರ ಸೇರಿದಂತೆ ಗೋವಿನ ವಿವಿಧ ಉತ್ಪನ್ನಗಳ ಬಗ್ಗೆ ಸಂಶೋಧನೆ ನಡೆಸುವಂತೆ ಈ ಸಮಿತಿಗೆ ಸೂಚಿಸಲಾಗಿತ್ತು. ಅದರಂತೆ, ಪಂಚಗವ್ಯಗಳ ಅನುಕೂಲತೆಗಳ ಬಗ್ಗೆ ಕೇಂದ್ರ ಸಚಿವ ಹರ್ಷವರ್ಧನ್‌ ನೇತೃತ್ವದ ಈ ಸಮಿತಿಯು ಅಧ್ಯಯನ ನಡೆಸುತ್ತಿದೆ.

ಪ್ರತಿ ಬ್ಲಾಕ್‌ನಲ್ಲೂ ಗೋಶಾಲೆ
ಸಿಎಂ ಯೋಗಿ ಆದಿತ್ಯನಾಥ್‌ ಸರ್ಕಾರವು ರಾಜ್ಯದ 7 ಜಿಲ್ಲೆಗಳು ಹಾಗೂ ನಗರಪ್ರದೇಶಗಳ 16 ಕಡೆಗಳಲ್ಲಿ ಒಂದು ಸಾವಿರ ಗೋವುಗಳನ್ನು ಸಾಕುವಂಥ ಸಾಮರ್ಥ್ಯದ ಗೋಶಾಲೆಗಳನ್ನು ನಿರ್ಮಿಸಲು ಅನುಮತಿ ನೀಡಿದೆ. ರಾಜ್ಯದ ಪ್ರತಿ ಬ್ಲಾಕ್‌ನಲ್ಲೂ ಇಂಥ ಗೋಶಾಲೆ ನಿರ್ಮಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಸುರಕ್ಷಿತ ಪ್ರದೇಶಗಳಲ್ಲಿ ಹಾಗೂ ಮೇವು ಮತ್ತು ನೀರಿನ ಲಭ್ಯತೆ ಸಾಕಷ್ಟು ಇರುವಂಥ ಪ್ರದೇಶಗಳಲ್ಲೇ ಇದನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸುವ ಕುರಿತೂ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.