ಕೋವಿಡ್ ರಣಕೇಕೆ : ಮಾಸ್ಕ್ ಹಾಕದೇ 10,000 ದಂಡ ಕಟ್ಟಿದ ವ್ಯಕ್ತಿ!
Team Udayavani, Apr 20, 2021, 1:44 PM IST
ನವದೆಹಲಿ : ದೇಶಾದ್ಯಂತ ಕೋವಿಡ್ ಅಟ್ಟಹಾಸ ಮೆರೆಯುತ್ತಿರುವ ಕಾರಣ ಎಲ್ಲಾ ರಾಜ್ಯಗಳು ಈ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿವೆ. ದೆಹಲಿ ಸರ್ಕಾರ ಒಂದು ಹೆಜ್ಜೆ ಮುಂದೆ ಹೋಗಿ ಯಾರು ಮಾಸ್ಕ್ ಧರಿಸಿಲ್ಲವೋ ಅವರಿಗೆ ಮೊದಲು ಎಚ್ಚರಿಗೆ ನೀಡಿ 1000 ದಂಡ ಹಾಕುತ್ತಿದೆ. ಅದೇ ವ್ಯಕ್ತಿ ಮತ್ತೂ ಮಾಸ್ಕ್ ಧರಸದೇ ಹೋದರೆ ಅಂತವರಿಗೆ 10,000 ದಂಡ ಹಾಕಲಾಗುತ್ತಿದೆ. ಇಂತಹದ್ದೇ ಒಂದು ಪ್ರಕರಣ ಇದೀಗ ದೆಹಲಿಯಲ್ಲಿ ಕಂಡು ಬಂದಿದೆ. ವ್ಯಕ್ತಿಯೊಬ್ಬ ಮಾಸ್ಕ್ ಹಾಕದೆ 10,000 ದಂಡ ಕಟ್ಟಿದ್ದಾನೆ.
ದೆಹಲಿಯ ಡಿಯೋರಿಯಾ ಪ್ರದೇಶದ ಅಮರ್ಜಿತ್ ಯಾದವ್ ಎಂಬ ವ್ಯಕ್ತಿ ಮಾಸ್ಕ್ ಧರಿಸದೇ ಡಿಯೋರಿಯಾ ವೃತ್ತದಲ್ಲಿ ಏಪ್ರಿಲ್ 18 ರಂದು ಓಡಾದಿದ್ದಾರೆ. ಇದನ್ನು ಕಂಡ ಪೊಲೀಸರು ಅಮರ್ಜಿತ್ ಅವರಿಗೆ 1000 ದಂಡ ವಿಧಿಸಿದ್ದಾರೆ. ಇಷ್ಟಾದರೂ ಕೂಡ ಎಚ್ಚೆತ್ತುಕೊಳ್ಳದ ಈ ವ್ಯಕ್ತಿ ಮತ್ತೆ ಮಾಸ್ಕ್ ಹಾಕದೇ ಏಪ್ರಿಲ್ 19ರಂದೂ ಕೂಡ ಓಡಾಡಿದ್ದಾನೆ. ಇದನ್ನು ಗಮನಿಸಿದ ಪೊಲೀಸರು 10,000 ದಂಡ ವಿಧಿಸಿ ರಸೀದಿ ನೀಡಿದ್ದಾರೆ. ಈ ಬಗ್ಗೆ ಸ್ಟೇಷನ್ ಹೌಸ್ ಅಧಿಕಾರಿ ಟಿ.ಜೆ ಸಿಂಗ್ ಮಾಹಿತಿ ನೀಡಿದ್ದಾರೆ.
ದೆಹಲಿ ರಾಜ್ಯಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಹಠಾತ್ ಏರಿಕೆಯಾಗಿದ್ದು, ಸೋಮವಾರ(ಏಪ್ರಿಲ್ 18) 390 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಪ್ರೋಟೋಕಾಲ್ಗಳನ್ನು ಜಾರಿಗೆ ತರಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಡಿಯೋರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ರೀಪತಿ ಮಿಶ್ರಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ