ಪತ್ನಿಯನ್ನೇ ಜೂಜಿನಲ್ಲಿ ಪಣಕ್ಕಿಟ್ಟು ಸೋತ ಪತಿ, ಗೆದ್ದ ಸ್ನೇಹಿತರಿಂದ ಗ್ಯಾಂಗ್ ರೇಪ್!
Team Udayavani, Aug 2, 2019, 3:59 PM IST
ಲಕ್ನೋ:ಜೂಜು ಮತ್ತು ಕುಡಿತ ಒಟ್ಟಿಗೆ ಸೇರಿದರೆ ಏನಾಗುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ! ಕುಡಿತದ ಚಟಕ್ಕೆ ದಾಸನಾಗಿದ್ದ ವ್ಯಕ್ತಿ ಜೂಜಾಟದಲ್ಲಿ ತೊಡಗಿ ಹಣವನ್ನೆಲ್ಲಾ ಕಳೆದುಕೊಂಡ ಮೇಲೆ ಕೊನೆಗೆ ಪತ್ನಿಯನ್ನೇ ಪಣಕ್ಕಿಟ್ಟು ಸೋತಿದ್ದ. ಬಳಿಕ ಗೆದ್ದ ಸ್ನೇಹಿತರು ಆತನ ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರಪ್ರದೇಶದ ಜೈಪುರದಲ್ಲಿ ನಡೆದಿದೆ.
ಜೂಜಿನಲ್ಲಿ ಹೆಂಡತಿಯನ್ನು ಪಣಕ್ಕಿಟ್ಟು, ಸ್ನೇಹಿತರು ಗ್ಯಾಂಗ್ ರೇಪ್ ಮಾಡಿದ ಮೇಲೆ ಸಂತ್ರಸ್ತೆ ದೂರು ಕೊಡಲು ಪೊಲೀಸರ ಬಳಿ ಹೋದಾಗ ದೂರ ಸ್ವೀಕರಿಸಲು ನಿರಾಕರಿಸಿದ್ದರು. ಬಳಿಕ ಆಕೆ ಕೋರ್ಟ್ ಮೊರೆ ಹೋಗಿರುವುದಾಗಿ ವರದಿ ವಿವರಿಸಿದೆ.
ಕೋರ್ಟ್ ಆದೇಶದ ನಂತರ ಜೌನ್ ಪುರ್ ಜಿಲ್ಲೆಯ ಜಾಫರ್ ಬಾದ್ ಪೊಲೀಸ್ ಠಾಣೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಸಂತ್ರಸ್ತೆ ಜಾಫರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದಳು. ತನ್ನ ಗಂಡ ಕುಡುಕನಾಗಿದ್ದು, ಆತ ಜೂಜಿನಲ್ಲಿ ಹಣವನ್ನೆಲ್ಲಾ ಕಳೆದುಕೊಂಡ ಮೇಲೆ ತನ್ನನ್ನೇ(ಪತ್ನಿ) ಪಣಕ್ಕಿಟ್ಟಿದ್ದ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ವರದಿ ಹೇಳಿದೆ.
ಸಂತ್ರಸ್ತೆ ಗಂಡನ ಗೆಳೆಯ ಅರುಣ್ ಮತ್ತು ಸಂಬಂಧಿ ಅನಿಲ್ ಮನೆಗೆ ಕುಡಿಯಲು ಮತ್ತು ಜೂಜಾಡಲು ಬರುತ್ತಿದ್ದರು ಎಂದು ಮಾಹಿತಿ ನೀಡಿದ್ದು, ಒಂದು ದಿನ ಜೂಜಿನಲ್ಲಿ ಸೋತಾಗ, ಪತ್ನಿಯನ್ನೇ ಪಣಕ್ಕಿಟ್ಟಿದ್ದ. ಈ ಸಂದರ್ಭ ಬಳಸಿಕೊಂಡ ಅನಿಲ್ ಮತ್ತು ಅರುಣ್ ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ವಿವರಿಸಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆತ್ಮಹತ್ಯೆ ಪ್ರಕರಣ: ವಿಸ್ಮಯಾ ಪತಿಗೆ 10 ವರ್ಷ ಜೈಲುಶಿಕ್ಷೆ ವಿಧಿಸಿದ ಕೇರಳ ಕೋರ್ಟ್
ಅಮರನಾಥ ಯಾತ್ರೆಗೆ ಹೆಚ್ಚುವರಿ ಭದ್ರತಾ ಕ್ರಮ: ಸಿಆರ್ಪಿಎಫ್
ಜಮ್ಮು- ಕಾಶ್ಮೀರ: ಹಳ್ಳಕ್ಕೆ ಬಿದ್ದ ಸಮಂತಾ-ವಿಜಯ್ ದೇವರಕೊಂಡ ವಾಹನ
ಸಿಂಧುದುರ್ಗ: ಪ್ರವಾಸಿಗರ ದೋಣಿ ಮುಳುಗಿ ಇಬ್ಬರ ಸಾವು; ಮತ್ತಿಬ್ಬರ ಸ್ಥಿತಿ ಗಂಭೀರ
ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಆದಾಯ ಹೆಚ್ಚಿಸಿ ವೆಚ್ಚ ತಗ್ಗಿಸಲು ಕ್ರಮ: ಸಿಎಂ ಸಾವಂತ್
MUST WATCH
ಹೊಸ ಸೇರ್ಪಡೆ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ
ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ
ಲಕ್ಷಾಂತರ ಭಕ್ತರ ಮಧ್ಯೆ ಸಾಂಘವಾಗಿ ನೆರವೇರಿದ ಹುಲಿಗೆಮ್ಮದೇವಿ ಮಹಾ ರಥೋತ್ಸವ
ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ
ನಾಲತವಾಡ: ಮೂರು ವರ್ಷಗಳಿಗೊಮ್ಮೆ ನಡೆಯುವ ಗ್ರಾಮ ದೇವತೆ ಜಾತ್ರೆಗೆ ಅದ್ಧೂರಿ ಆರಂಭ