ಪತ್ನಿಯ ರುಂಡ ಕತ್ತರಿಸಿ ಠಾಣೆಗೆ ತಂದು ರಾಷ್ಟ್ರಗೀತೆ ಹಾಡಿದ ಪತಿ !, ಬೆಚ್ಚಿಬಿದ್ದ ಪೊಲೀಸರು
Team Udayavani, Feb 2, 2020, 1:45 PM IST
ಉತ್ತರಪ್ರದೇಶ: ಬೆಚ್ಚಿಬೀಳಿಸುವ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ತಲೆಯನ್ನೇ ಕಡಿದು ಪೊಲೀಸ್ ಠಾಣೆಗೆ ಹಿಡಿದುಕೊಂಡು ಬಂದ ದಾರುಣ ಘಟನೆ ಬಾರಾಬಂಕಿ ಸಮೀಪದ ಬಹದ್ದೂರ್ ಪುರ್ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಜಹಾಂಗೀರ್ ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಬಹದ್ದೂರ್ ಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯ ರುಂಡ ಕತ್ತರಿಸಿ ಗ್ರಾಮವುದ್ದಕ್ಕೂ ನಡೆದುಕೊಂಡೇ ಬಂದು ಪೊಲೀಸ್ ಠಾಣೆಗೆ ತಲುಪಿದ್ದಾನೆ. ಈ ಭೀಕರ ದೃಶ್ಯ ಕಂಡು ದಂಗಾದ ಪೊಲೀಸರು ಕೂಡಲೇ ಆತನ ಕೈಯಲ್ಲಿದ್ದ ರಕ್ತಸಿಕ್ತವಾದ ಚೀಲವನ್ನು ತೆರೆಯಲು ಪ್ರಯತ್ನಿಸಿದ್ದಾರೆ. ಆದರೇ ಆತ ರಾಷ್ಟ್ರಗೀತೆ ಹಾಡಲು ತೊಡಗಿ ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗಿದ್ದಾನೆ. ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿ ಕೊನೆಗೆ ಆತನ ಕೈಯಲ್ಲಿದ್ದ ರುಂಡವನ್ನು ಕಸಿದುಕೊಂಡು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಅದೇ ಗ್ರಾಮದ ಅಖಿಲೇಶ್ ರಾವತ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಎಸ್ ಪಿ ಅರವಿಂದ ಚತುರ್ವೇಧಿ, ಆರೋಪಿ ಅಖಿಲೇಶ್ ಯಾದವ್ ತನ್ನ ಪತ್ನಿಯನ್ನು ಹತ್ಯೆಗೈದು ಆ ಬಳಿಕ ರುಂಡವನ್ನು ಕತ್ತರಿಸಿ ಪೊಲೀಸ್ ಠಾಣೆಗೆ ತಂದಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು