UP: ಪ್ರವಾದಿಗೆ ಅವಮಾನಿಸಿ, ಧರ್ಮ ನಿಂದನೆ; ಬಸ್ಸಿನಲ್ಲೇ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
Team Udayavani, Nov 25, 2023, 9:02 AM IST
ಲಕ್ನೋ: ಟಿಕೆಟ್ ವಿಚಾರದಲ್ಲಿ ಯುವಕನೊಬ್ಬ ಬಸ್ ಕಂಡಕ್ಟರ್ ಜೊತೆ ವಾಗ್ವಾದಕ್ಕಿಳಿದು ಆತನ ಮೇಲೆ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಶುಕ್ರವಾರ(ನ.24 ರಂದು) ನಡೆದಿದೆ.
ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಲಾರೆಬ್ ಹಶ್ಮಿ (20) ಎಂದು ಗುರುತಿಸಲಾಗಿದೆ. ಅವರು ಬಸ್ ಕಂಡಕ್ಟರ್ ಹರಿಕೇಶ್ ವಿಶ್ವಕರ್ಮ (24) ಅವರೊಂದಿಗೆ ಟಿಕೆಟ್ ದರದ ಬಗ್ಗೆ ಜಗಳವಾಡಿದ್ದಾರೆ.
ಘಟನೆ ವಿವರ:
ಮೊದಲ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಹಶ್ಮಿ ಕಂಡಕ್ಟರ್ ವಿಶ್ವಕರ್ಮ ಅವರೊಂದಿಗೆ ಟಿಕೆಟ್ ದರದ ವಿಚಾರವಾಗಿ ವಾಗ್ವಾದ ನಡೆಸಿದ್ದಾನೆ. ವಾಗ್ವಾದದ ನಡುವೆ ಇದ್ದಕ್ಕಿದ್ದಂತೆ ಹಶ್ಮಿ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದಾನೆ. ಕ್ಲೀವರ್ನಿಂದ(ಚೂಪಾದ ಚಾಕು) ಹಲ್ಲೆ ನಡೆಸಿದ್ದು, ಆತನ ಕುತ್ತಿಗೆ ಮತ್ತು ದೇಹದ ಇತರ ಭಾಗಗಳಿಗೆ ಚಾಕುವಿನಿಂದ ಇರಿದು, ಬಸ್ ಹೋಗುತ್ತಲೇ ಅಲ್ಲಿಂದ ಹಾರಿ ಕಾಲೇಜು ಕ್ಯಾಂಪಸ್ ಗೆ ತೆರಳಿದ್ದಾನೆ.
ವಿಡಿಯೋ ಮಾಡಿದ ಆರೋಪಿ: ಕಾಲೇಜು ಕ್ಯಾಂಪಸ್ ಒಳಗೆ ಹೋದ ಬಳಿಕ, ಹಶ್ಮಿ ಮೊಬೈಲ್ ನಲ್ಲಿ ವಿಡಿಯೋ ಮಾಡಿ, ಕೃತ್ಯವನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. “ಬಸ್ ಕಂಡಕ್ಟರ್ ಧರ್ಮನಿಂದನೆ ಮತ್ತು ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸಿದ್ದಾರೆ” ಎಂದು ಆರೋಪಿಸಿ ಮಾಡಿರುವ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ಅವರ ಹೆಸರನ್ನು ವಿಡಿಯೋದಲ್ಲಿ ಆರೋಪಿ ಹೇಳಿದ್ದಾನೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾಲೇಜು ಒಳಗೆ ಹೋಗಿ ಆರೋಪಿಯನ್ನು ಬಂಧಿಸಲು ತೆರಳಿದ್ದಾರೆ. ಈ ವೇಳೆ ಆರೋಪಿ ಪರಾರಿ ಆಗಲು ಯತ್ನಿಸಿದ್ದು, ಆತನ ಕಾಲಿಗೆ ಫೈಯರ್ ಮಾಡಿ, ಕೃತ್ಯವೆಸಗಿದ ಚಾಕವನ್ನು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇತ್ತ ಗಾಯಾಳು ಕಂಡಕ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ