ಹೃದಯಾಘಾತ: ಮದುವೆ ಸಂಭ್ರಮದಲ್ಲಿ ಕುಣಿಯುವಾಗ ಕುಸಿದು ಬಿದ್ದು ವ್ಯಕ್ತಿ ಸಾವು; ವಿಡಿಯೋ ವೈರಲ್
Team Udayavani, Nov 29, 2022, 7:20 PM IST
ವಾರಾಣಸಿ: ಇತ್ತೀಚೆಗೆ ಹೃದಯಾಘಾತಗಳು ಸಾಮಾನ್ಯವಾಗಿದೆ. ಸಣ್ಣ ವಯಸ್ಸಿನವರೂ ಕೂಡ ಕಾರ್ಡಿಯಾಕ್ ಅರೆಸ್ಟ್ ನಂತಹ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಮದುವೆ ಸಂಭ್ರಮದಲ್ಲಿ ವ್ಯಕ್ತಿಯೊಬ್ಬ ಹೀಗೆಯೇ ದುರಂತ ಅಂತ್ಯವಾಗಿದ್ದಾನೆ.
ಉತ್ತರಪ್ರದೇಶದ ವಾರಾಣಸಿ ಮೂಲದ ಮನೋಜ್ ವಿಶ್ವಕರ್ಮ (40) ಎನ್ನುವವರು ಪಿಲ್ಪಾನಿ ಕತ್ರಾ ಬಳಿಯ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅಲ್ಲಿ ಸಂಬಂಧಿಕರೊಂದಿಗೆ ಸಂತಸದಲ್ಲಿ ಎರಡು ಹೆಜ್ಜೆ ನೃತ್ಯವನ್ನು ಮಾಡಿದ್ದಾರೆ. ಈ ಖುಷಿಯ ಕ್ಷಣದಲ್ಲಿ ಅದೇನಾಯಿತೋ ಗೊತ್ತಿಲ್ಲ. ಕುಣಿಯುತ್ತಿದ್ದ ಮನೋಜ್ ಒಂದೇ ಬಾರಿ ಕುಸಿದು ಬಿದ್ದಿದ್ದಾರೆ. ಅಕ್ಕಪಕ್ಕದಲ್ಲಿದ್ದವರು ಅವರನ್ನು ಎಬ್ಬಿಸಲು ಪ್ರಯತ್ನಪಟ್ಟಿದ್ದಾರೆ. ಆದರೆ ಕುಸಿದು ಬಿದ್ದ ಮನೋಜ್ ಮತ್ತೆ ಏಳಲೇ ಇಲ್ಲ.
ಹೃದಯಾಘಾತದಿಂದ ಮನೋಜ್ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಈ ಘಟನೆ ನ.25 ರಂದು ನಡೆದಿದ್ದು ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಈಗ ವೈರಲ್ ಆಗುತ್ತಿದೆ.
ಇಂಥದ್ದೇ ಘಟನೆ ಉತ್ತರ ಪ್ರದೇಶದ ದೇವಗಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿದ್ದು, 51 ವರ್ಷದ ವ್ಯಕ್ತಿಯೊಬ್ಬ ‘ರಾಸ್’( ಮದುವೆಯ ಮುನ್ನ ನಡೆಯುವ ಕಾರ್ಯಕ್ರಮ) ಸಂಭ್ರಮದಲ್ಲಿ ಕುಣಿಯುವಾಗ ಕುಸಿದು ಬಿದ್ದಿದ್ದರು.
एक और हंसते-गाते-नाचते मौत LIVE
वाराणसी में शादी में डांस करते हुए एक व्यक्ति की मौक़े पर मौत।
कितनी ऐसी मौत के बाद हमें एहसास होगा कि इसपर चिंता करने की ज़रूरत है pic.twitter.com/NvwdaXzwk3
— Narendra nath mishra (@iamnarendranath) November 29, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ