UP ಸಾರ್ವಜನಿಕ ಸ್ಥಳದಲ್ಲಿ ನಮಾಜಿಗೆ ಅವಕಾಶ ಇಲ್ಲ: ಓವೈಸಿ ಆಕ್ರೋಶ
Team Udayavani, Dec 26, 2018, 11:31 AM IST
ಹೊಸದಿಲ್ಲಿ : ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 58ರ ಖಾಲಿ ಪ್ರದೇಶದಲ್ಲಿ ಪ್ರಾರ್ಥನೆ ನಡೆಸುವುದಕ್ಕೆ ತಮ್ಮ ನೌಕರರಿಗೆ ಬಿಡಕೂಡದು ಎಂದು ಉತ್ತರ ಪ್ರದೇಶ ಪೊಲೀಸರು ಬಹು ರಾಷ್ಟ್ರೀಯ ಕಂಪೆನಿಗಳಿಗೆ ಮತ್ತು ಕೈಗಾರಿಕಾ ಘಟಕಗಳಿಗೆ ಆದೇಶ ಹೊರಡಿಸಿರುವುದನ್ನು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಖಂಡಿಸಿದ್ದಾರೆ.
ಯಾರಿಗೂ ತೊಂದರೆ, ಅಡಚಣೆ ಉಂಟಾಗದ ಖಾಲಿ ಸಾರ್ವಜನಿಕ ಸ್ಥಳದಲ್ಲಿ ನಮಾಜು ಸಲ್ಲಿಸಿದರೆ ಅದರಿಂದ ಶಾಂತಿ, ನಮ್ಮದೆ, ಸಾಮರಸ್ಯಕ್ಕೆ ಧಕ್ಕೆ ಆಗುವುದು ಹೇಗೆ ? ಎಂದು ಓವೈಸಿ ಪ್ರಶ್ನಿಸಿದ್ದಾರೆ.
ನೋಯ್ಡಾದ ಸೆಕ್ಟರ್ 58ರ ಸಾರ್ವಜನಿಕ ಖಾಲಿ ಸ್ಥಳದಲ್ಲಿ ನಮಾಜು ನಡೆಸುವುದರಿಂದ ಸಾರ್ವಜನಿಕರಿಗೆ ತೊಂದರೆ, ಅಡಚಣೆ ಉಂಟಾಗುತ್ತದೆ ಎಂದು ಪೊಲೀಸರು ಬಹು ರಾಷ್ಟ್ರೀಯ ಕಂಪೆನಿಗಳಿಗೆ ಮತ್ತು ಕೈಗಾರಿಕಾ ಘಟಕಗಳಿಗೆ ನೊಟೀಸ್ ಜಾರಿ ಮಾಡಿ ತಮ್ಮ ಉದ್ಯೋಗಿಗಳಿಗೆ ಅಲ್ಲಿ ಪ್ರಾರ್ಥನೆ ನಡೆಸುವುದನ್ನು ನಿರ್ಬಂಧಿಸಬೇಕು ಎಂದು ಉತ್ತರ ಪ್ರದೇಶ ಪೊಲೀಸರು ನೊಟೀಸು ಜಾರಿ ಮಾಡಿದ್ದರು.
ಒಟ್ಟಿನಲ್ಲಿ ಮುಸಲ್ಮಾನರಿಗೆ ನೀವು ಏನೇ ಮಾಡಿದರೂ ತಪ್ಪು ನಿಮ್ಮದೇ ಎಂಬ ಸಂದೇಶ ಈ ಆದೇಶದಲ್ಲಿ ಅಡಕವಾಗಿರುವಂತಿದೆ. ಇಲ್ಲದಿದ್ದರೆ ಉದ್ಯೋಗಿಗಳು ತಮ್ಮ ವೈಯಕ್ತಿಕ ನೆಲೆಯಲ್ಲಿ ಸಲ್ಲಿಸುವ ಪ್ರಾರ್ಥನೆಗೆ ಬಹು ರಾಷ್ಟ್ರೀಯ ಕಂಪೆನಿಗಳನ್ನು ಹೊಣೆಗಾರರನ್ನಾಗಿ ಮಾಡುವುದು ಎಷ್ಟು ಸರಿ? ಎಂದು ಓವೈಸಿ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!