ಕಬ್ಬಡಿ ಕ್ರೀಡಾಪಟುಗಳಿಗೆ ಶೌಚಾಲಯದಲ್ಲಿ ಊಟದ ವ್ಯವಸ್ಥೆ : ವಿಡಿಯೋ ವೈರಲ್
Team Udayavani, Sep 20, 2022, 2:18 PM IST
ಉತ್ತರ ಪ್ರದೇಶ : ಕಬ್ಬಡಿ ಕ್ರೀಡಾಪಟುಗಳಿಗೆ ಇಲ್ಲಿನ ಶೌಚಾಲಯದಲ್ಲಿ ಊಟದ ವ್ಯವಸ್ಥೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸಹಾರನ್ ಪುರದಲ್ಲಿ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ಸದ್ದು ಮಾಡುತ್ತಿದೆ.
ಸೆಪ್ಟೆಂಬರ್ 16 ರಂದು ಸಹರಾನ್ ಪುರದಲ್ಲಿ 17 ವರ್ಷದೊಳಗಿನವರ ರಾಜ್ಯ ಮಟ್ಟದ ಕಬ್ಬಡಿ ಟೂರ್ನಿ ನಡೆದಿದ್ದು, ಈ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಆಹಾರ ತಯಾರಿಸಿ ಟಾಯ್ಲೆಟ್ ನಲ್ಲಿ ಇಡಲಾಗಿದೆ ಅದನ್ನೇ ಕ್ರೀಡಾಪಟುಗಳು ಬಡಿಸಿಕೊಂಡು ಊಟಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದಕ್ಕೆ ಪುಷ್ಟಿ ನೀಡುವಂತೆ ವಿಡಿಯೋ ಕೂಡಾ ವೈರಲ್ ಆಗಿದ್ದು ನೆಟ್ಟಿಗರಿಂದ ಭಾರಿ ಆಕ್ರೋಶಕ್ಕೆ ವ್ಯಕ್ತವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಕ್ರೀಡಾ ಅಧಿಕಾರಿಗಳು ಕ್ರೀಡಾಪಟುಗಳಿಗೆ ಉತ್ತಮವಾದ ಆಹಾರವನ್ನೇ ನೀಡಲಾಗಿದೆ ”ಮಳೆಯಾಗುತ್ತಿದ್ದರಿಂದ ಸ್ವಿಮ್ಮಿಂಗ್ ಪೂಲ್ ಪ್ರದೇಶದಲ್ಲಿ ಊಟದ ವ್ಯವಸ್ಥೆ ಮಾಡಿದ್ದೆವು, ಈಜುಕೊಳದ ಪಕ್ಕದಲ್ಲಿರುವ ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ಆಹಾರ ಇಡಲಾಗಿತ್ತು, ಕ್ರೀಡಾಂಗಣದಲ್ಲಿ ಕೆಲ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕಾರಣ ಆಹಾರ ಇಡಲು ಬೇರೆ ಸ್ಥಳ ಇರಲಿಲ್ಲ ಎಂದು ಅನಿಮೇಶ್ ಸಕ್ಸೇನಾ ಸಮಜಾಯಿಷಿ ನೀಡಿದ್ದಾರೆ. ಆದರೆ ವಿಡಿಯೋ ದಲ್ಲಿ ಕಾಣುವಂತೆ ಅಲ್ಲಿನ ಕ್ರೀಡಾಪಟುಗಳು ಹೇಳಿಕೆ ನೀಡಿದ್ದು ಊಟಕ್ಕೆ ಸರಿಯಾದ ಜಾಗದ ವ್ಯವಸ್ಥೆಯೂ ಇರಲಿಲ್ಲ, ಆಹಾರಗಳನ್ನು ಶೌಚಾಲಯಲ್ಲೇ ಇಟ್ಟಿದ್ದರು ನಾವು ಅಲ್ಲೇ ಊಟ ಮಾಡಬೇಕಿತ್ತು, ಅಲ್ಲದೆ ಊಟದ ಗುಣಮಟ್ಟವು ಕೆಟ್ಟದಾಗಿತ್ತು ಎಂದು ದೂರಿದ್ದಾರೆ.
ಇದನ್ನೂ ಓದಿ : ಸಿದ್ದರಾಮಯ್ಯ ಅವಧಿಯಲ್ಲಿ ಹಗರಣ ನಡೆದಿದ್ದರೆ ಸಿಬಿಐ ಮೂಲಕ ತನಿಖೆ ನಡೆಸಲಿ: ಕಿಮ್ಮನೆ
Food served to kabaddi players in #UttarPradesh kept in toilet. Is this how #BJP respects the players? Shameful! pic.twitter.com/SkxZjyQYza
— YSR (@ysathishreddy) September 20, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
MUST WATCH
ಹೊಸ ಸೇರ್ಪಡೆ
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್