Lucknow: ಪೊಲೀಸರ ಕಿರುಕುಳ ಆರೋಪ; UPSC ಪರೀಕ್ಷೆಯ ತಯಾರಿಯಲ್ಲಿದ್ದ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Jun 12, 2023, 12:23 PM IST
ಲಕ್ನೋ: ಮೂವರು ಪೊಲೀಸರ ಮೇಲೆ ಕಿರುಕುಳದ ಆರೋಪವನ್ನು ಮಾಡಿ ಯುಪಿಎಸ್ ಸಿ ಆಕಾಂಕ್ಷಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿರುವುದು ವರದಿಯಾಗಿದೆ.
ಆಶಿಶ್ ಕುಮಾರ್ ಮೃತ ವಿದ್ಯಾರ್ಥಿ.
ಯುಪಿಎಸ್ ಸಿ ಪರೀಕ್ಷೆಯ ತಯಾರಿಯಲ್ಲಿದ್ದ ಆಶಿಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಪತ್ರದಲ್ಲಿ ಮೂವರು ಪೊಲೀಸರ ಹೆಸರನ್ನು ಬರೆದಿಟ್ಟಿದ್ದಾನೆ.
ಇದನ್ನೂ ಓದಿ:Mini Taj Mahal: ತಾಯಿಯ ಪ್ರೀತಿಗೆ ಗೌರವ ಸಲ್ಲಿಸಲು ʼಮಿನಿ ತಾಜ್ ಮಹಲ್ʼ ನಿರ್ಮಿಸಿದ ಮಗ
ಪ್ರಕರಣವೊಂದರಲ್ಲಿ ಆಶಿಶ್ ಕುಮಾರ್ ಅವರ ಮೇಲೆ ಸುಳ್ಳು ಆಪಾದನೆಯನ್ನು ಮಾಡಿ ಸಿಲುಕಿಸಲಾಗಿದೆ. ಈ ಬಗ್ಗೆ ಆತನಿಗೆ ಮೂವರು ಪೊಲೀಸರು ಕಿರುಕುಳ ನೀಡುತ್ತಿದ್ದರು. ಕಿರುಕುಳದಿಂದ ಬೇಸತ್ತು, ಬೇರೆ ಆಯ್ಕೆಯಿಲ್ಲದೆ ಈ ಹೆಜ್ಜೆಯನ್ನು ಇಟ್ಟಿದ್ದಾನೆ ಎಂದು ಪೊಲೀಸರು ಹೇಳಿರುವುದಾಗಿ ವರದಿ ತಿಳಿಸಿದೆ.
ರಹೀಮಾಬಾದ್ ಪೊಲೀಸ್ ಠಾಣೆಯ ಮೂವರು ಪೊಲೀಸರ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿದ್ದು, ಈ ಪತ್ರವನ್ನು ಮೃತನ ಮನೆಯವರು ಪೊಲೀಸರಿಗೆ ನೀಡಿದ್ದಾರೆ. ವಿದ್ಯಾರ್ಥಿಯ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ಮೂವರು ಅಧಿಕಾರಿಗಳನ್ನು ಪೊಲೀಸ್ ಲೈನ್ಗೆ ವರ್ಗಾಯಿಸಲಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಎಸಿಪಿ ಮಲಿಹಾಬಾದ್ ಅವರಿಗೆ ಸೂಚಿಸಿದ್ದೇವೆ, ಆತ್ಮಹತ್ಯೆ ಪತ್ರವನ್ನು ಪರಿಶೀಲಿಸಲಾಗುವುದು ಎಂದು ಡಿಸಿಪಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !