ಉತ್ತರ ಪ್ರದೇಶ : ಹೆಚ್ಚಿನ ವರದಕ್ಷಿಣೆಗಾಗಿ ನವ ವಿವಾಹಿತೆಯ ಕೊಲೆ
Team Udayavani, Feb 2, 2019, 6:49 AM IST
ಮುಜಫರನಗರ, ಉತ್ತರ ಪ್ರದೇಶ : ಶಾಮ್ಲಿ ಜಿಲ್ಲೆಯ ಗಢೀ ಪುಖ್ತಾ ಪೊಲೀಸ್ ಠಾಣೆ ವ್ಯಾಪ್ತಿಯ ಪಕ್ಕೀ ಗಢೀ ಗ್ರಾಮದಲ್ಲಿ, ಹೆಚ್ಚಿನ ವರದಕ್ಷಿಣೆಗಾಗಿ ನವ ವಿವಾಹಿತೆಯನ್ನು ಆಕೆಯ ಗಂಡ ಮತ್ತು ಮನೆಯವರು ಸೇರಿಕೊಂಡು ಕೊಂದಿರುವ ಘಟನೆ ವರದಿಯಾಗಿದೆ.
ಮೃತ ನವ ವಿವಾಹಿತೆ ಸನಾ ಖಾನ್ (28) ಒಂಬತ್ತು ತಿಂಗಳ ಹಿಂದೆ ಅರಿಝ್ ಹಸನ್ ಎಂಬಾತನನ್ನು ಮದುವೆಯಾಗಿದ್ದಳು. ಆಕೆಯನ್ನು ಕೊಂದಿರುವ ಆರೋಪದ ಮೇಲೆ ಪೊಲೀಸರು ಇದೀಗ ತಲೆ ಮರೆಸಿಕೊಂಡಿರುವ ಆಕೆಯ ಪತಿ ಮತ್ತು ಆತನ ಐವರು ಸಂಬಂಧಿಗಳ ವಿರುದ್ಧ ಕೊಲೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮೃತ ಮಹಿಳೆಯ ಸಹೋದರ ಹೇಹಾದ್ ಖಾನ್ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ ಆಕೆಯ ಗಂಡ ಮತ್ತು ಮನೆಯವರು 10 ಲಕ್ಷ ರೂ. ವರದಕ್ಷಿಣೆಗಾಗಿ ಕಳೆದ ಹಲವು ತಿಂಗಳಿಂದ ಸನಾಳನ್ನು ದೈಹಿತವಾಗಿ ಮಾನಸಿಕವಾಗಿ ಪೀಡಿಸುತ್ತಿದ್ದರು.
ಸನಾಳ ಸಾವಿನಿಂದ ಉದ್ರಿಕ್ತತೆ ತಲೆದೋರಿದ್ದು ಸಿಟ್ಟಿಗೆದ್ದಿರುವ ಗ್ರಾಮಸ್ಥರು ನವಾಲ್ತಿ ಚೌಕ್ ಸಮೀಪ ರಸ್ತೆ ತಡೆ ನಡೆಸಿ ಕೊಲೆಗಾರರ ತ್ವರಿತ ಬಂಧನವನ್ನು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್