ಬರಲಿದೆ ದೇಶೀಯ ಆಪರೇಟಿಂಗ್ ಸಿಸ್ಟಮ್: ಏನಿದು ಉಚಿತವಾಗಿ ಬಳಸಬಹುದಾದ ಭಾರ್ ಒಎಸ್?
Team Udayavani, Jan 25, 2023, 7:25 AM IST
ಹೊಸದಿಲ್ಲಿ: ಗೂಗಲ್ನ ಆ್ಯಂಡ್ರಾಯ್ಡ ಮತ್ತು ಆ್ಯಪಲ್ನ ಐಒಎಸ್ಗೆ ಪರ್ಯಾಯವಾಗಿ ಸ್ವದೇಶಿ ನಿರ್ಮಿತ ಭಾರ್ಒಎಸ್ ಎಂಬ ಆಪರೇಟಿಂಗ್ ಸಿಸ್ಟಮ್ ರೂಪುಗೊಂಡಿದ್ದು, ಮಂಗಳವಾರ ಇದರ ಪರೀಕ್ಷೆ ನಡೆಸಲಾಗಿದೆ.
ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ಧರ್ಮೇಂದ್ರ ಪ್ರಧಾನ್ ಇದನ್ನು ಬಿಡುಗಡೆಗೊಳಿಸಿದ್ದು, ಟೆಸ್ಟಿಂಗ್ ನಲ್ಲೂ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಧರ್ಮೇಂದ್ರ ಪ್ರಧಾನ್, ಎಂಟು ವರ್ಷಗಳ ಹಿಂದೆ ಪ್ರಧಾನಿ ಮೋದಿಯವರು ಡಿಜಿಟಲ್ ಇಂಡಿಯಾದ ಬಗ್ಗೆ ಹೇಳಿದ್ದರು. ಕೆಲವರು ಅದನ್ನು ಲೇವಡಿ ಮಾಡಿದ್ದರು. ಆದರೆ ಈಗ ತಾಂತ್ರಿಕ ತಜ್ಞರು, ನಾವೀನ್ಯತ ಪ್ರವೀಣರು, ಉದ್ಯಮಗಳು ಮತ್ತು ನೀತಿ ನಿರೂಪಕರು ಭಾರತದ ಶಕ್ತಿಯ ಬಗ್ಗೆ ಒಪ್ಪಿಕೊಂಡಿದ್ದಾರೆ ಎಂದರು.
ಏನಿದು ಭಾರ್ ಒಎಸ್?
ಈ ಆಪರೇಟಿಂಗ್ ಸಿಸ್ಟಂನ ಅಭಿವೃದ್ಧಿಗೆ ಕೇಂದ್ರ ಸರಕಾರವೇ ಸಂಪೂರ್ಣವಾಗಿ ಹಣ ವ್ಯಯಿಸಿದೆ. ಹೀಗಾಗಿ ಇದೊಂದು ಮುಕ್ತ ಸಾಫ್ಟ್ ವೇರ್ ಆಗಿದೆ. ಸರಕಾರ ಮತ್ತು ಸಾರ್ವಜನಿಕ ವ್ಯವಸ್ಥೆಗಳಲ್ಲಿ ಇದನ್ನು ಬಳಸಬಹುದಾಗಿದೆ. ಅಲ್ಲದೆ ಸ್ಮಾರ್ಟ್ ಫೋನ್ ಉದ್ಯಮವು ಆ್ಯಂಡ್ರಾಯ್ಡ ಮತ್ತು ಐಒಎಸ್ ಮೇಲೆ ಸಂಪೂರ್ಣ ಅವಲಂಬಿತವಾಗಿದೆ. ಇದನ್ನು ತಪ್ಪಿಸುವ ಸಲುವಾಗಿ ಸರಕಾರ ಇದನ್ನು ರೂಪಿಸಿದೆ. ಈ ಮೂಲಕ ಮುಂದಿನ ದಿನ ಗಳಲ್ಲಿ ಸ್ವದೇಶಿ ಸ್ಮಾರ್ಟ್ ಫೋನ್ಗಳ ತಯಾರಿಕೆಗೆ ದೊಡ್ಡ ವೇದಿಕೆ ಸಿಕ್ಕಂತಾಗಿದೆ. ಇದನ್ನು ಜಾಂಡ್ಕೆಆಪರೇಶನ್ಸ್ ಪ್ರೈ.ಲಿ.ನ ವರು ರೂಪಿಸಿದ್ದಾರೆ. ಇದಕ್ಕೆ ಐಐಟಿ ಮದ್ರಾಸ್ನ ಸೆಕ್ಷನ್ 8 ಕಂಪೆನಿ ಸಹಕಾರ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ