ರೇನ್ ಕೋಟ್ ಹಾಕಿ ಸ್ನಾನ ಮಾಡೋದು ಗೊತ್ತು! ಪ್ರಧಾನಿ ಟಾಂಗ್ ಗೆ ಕೈ ಕಿಡಿ
Team Udayavani, Feb 8, 2017, 6:56 PM IST
ನವದೆಹಲಿ: ದೇಶದಲ್ಲಿನ ನೋಟು ನಿಷೇಧ ಯಾವುದೇ ಪಕ್ಷದ ವಿರುದ್ಧದ ನಿರ್ಧಾರವಲ್ಲ. ನೋಟು ನಿಷೇಧ ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧದ ಹೋರಾಟವಾಗಿದೆ ವಿನಃ ರಾಜಕೀಯದ ವಿರುದ್ಧವಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ನೋಟು ನಿಷೇಧದ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು. ಅಲ್ಲದೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಕಾಂಗ್ರೆಸ್ ವಿರುದ್ಧ ಕಟು ವಾಗ್ದಾಳಿ ನಡೆಸಿದರು.
ಭಾರತದಲ್ಲಿನ ಭ್ರಷ್ಟಾಚಾರದಿಂದಾಗಿ ದೆಶದ ಬಡವರು ಮತ್ತು ಮಧ್ಯಮ ವರ್ಗದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ರಾಜ್ಯಸಭೆಯಲ್ಲಿ ಮಾತನಾಡುತ್ತ ಹೇಳಿದರು.
ಮನಮೋಹನ್ ಸಿಂಗ್ ಅವರು ಓರ್ವ ಅಸಾಧಾರಣ ಮನುಷ್ಯ. ಅವರು ಪ್ರಧಾನಿಯಾಗಿದ್ದಾಗ ಸಾವಿರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದರೂ ಅವರ ವಿರುದ್ಧ ಯಾವುದೇ ಕಪ್ಪು ಚುಕ್ಕೆ ಇಲ್ಲ. ಇದು ನಿಜಕ್ಕೂ ಅಚ್ಚರಿಯ ವಿಷಯ. ಅವರಿಗೆ ರೇನ್ ಕೋಟ್ ಹಾಕಿ ಸ್ನಾನ ಮಾಡೋದು ಗೊತ್ತು ಎಂದು ವ್ಯಂಗ್ಯವಾಡಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಪ್ರಧಾನಿ ಮೋದಿ ಅವರು ವಾಗ್ದಾಳಿ ನಡೆಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ಸಂಸದರು ರಾಜ್ಯಸಭೆ ಕಲಾಪದಿಂದ ಸಭಾತ್ಯಾಗ ನಡೆಸಿದರು.
ಕಾಂಗ್ರೆಸ್ ಗೆ ಟಾಂಗ್:
ಕಳೆದ 70ವರ್ಷಗಳ ಕಾಲ ದೇಶವನ್ನು ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದೆ. ನಾನು ಕೇವಲ 2.5 ವರ್ಷ ಆಡಳಿತ ನಡೆಸಿದ್ದೇನೆ. ಹಾಗಾದರೆ ದೇಶದ ಅಭಿವೃದ್ಧಿ ಆಗಿಲ್ಲ ಅಂದರೆ ಅದಕ್ಕೆ ನಾನೊಬ್ಬನೆ ಕಾರಣನಾ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು.
ನೋಟು ನಿಷೇಧದ ಕ್ರಮ ಹೊಸದೇನಲ್ಲ, 1972ರಲ್ಲಿ ಜ್ಯೋತಿ ಬಸು ಕೂಡಾ ಲೋಕಸಭೆಯಲ್ಲಿ ನೋಟು ನಿಷೇಧದ ಬಗ್ಗೆ ಉಲ್ಲೇಖಿಸಿದ್ದರು. ಇಂದು ನಾವು ಏನೇ ಮಾಡಲು ಹೊರಟರು ಕೂಡಾ ಅದನ್ನು ಲೇವಡಿ ಮಾಡಲಾಗುತ್ತಿದೆ. ಸ್ವಚ್ಚತಾ ಆಂದೋಲನಾ, ನೋಟು ನಿಷೇಧದ ಬಗ್ಗೆ ವಿಪಕ್ಷಗಳು ಕೂಗಾಡುತ್ತಿವೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು