ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದ ರಾಹುಲ್ ಹೇಳಿಕೆ; ಕಲಾಪದಲ್ಲಿ ಹೊಯ್, ಕೈ!
ಸಂಸದರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕಂ ಟಾಗೋರ್ ತಿಳಿಸಿದರು.
Team Udayavani, Feb 7, 2020, 6:16 PM IST
ನವದೆಹಲಿ: ಲೋಕಸಭಾ ಕಲಾಪದಲ್ಲಿ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರು ಕೈ-ಕೈ ಮಿಲಾಯಿಸಿದ ಘಟನೆ ಶುಕ್ರವಾರ ನಡೆದಿದ್ದು, ಸುಗಮ ಕಲಾಪಕ್ಕೆ ತೀವ್ರ ಅಡ್ಡಿಯಾಗಿರುವುದಾಗಿ ವರದಿ ತಿಳಿಸಿದೆ.
ಕಲಾಪದಲ್ಲಿ ವಾಕ್ಸಮರ, ಕೈ, ಕೈ ಮಿಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರು ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ಸಲ್ಲಿಸಿರುವುದಾಗಿ ವರದಿ ಹೇಳಿದೆ.
ಏನಿದು ಕೋಲಾಹಲ, ಗದ್ದಲ:
ಲೋಕಸಭೆ ಕಲಾಪದ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಮುಖಂಡ ಮೆಡಿಕಲ್ ಕಾಲೇಜುಗಳಿಗೆ ಸಂಬಂಧಿಸಿದ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ಉತ್ತರ ನೀಡುವ ವೇಳೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದ್ದರು.
“ದೇಶದ ಯುವ ಜನತೆ ನಿರುದ್ಯೋಗದಿಂದ ರೋಸಿ ಹೋಗಿ ನರೇಂದ್ರ ಮೋದಿ ಅವರನ್ನು ದೊಣ್ಣೆಯಿಂದ ಹೊಡೆಯಲಿದ್ದಾರೆ ಎಂದು ರಾಹುಲ್ ಗಾಂಧಿ ಇತ್ತೀಚೆಗೆ ಹೇಳಿಕೆ ನೀಡಿದ್ದರು ಎಂದು ವರದಿ ತಿಳಿಸಿದೆ.
ಸ್ಪೀಕರ್ ಅವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ ದಯವಿಟ್ಟು ನಾನು ಪ್ರಶ್ನೆಗೆ ಉತ್ತರ ಕೊಡುವ ಮೊದಲು ನಮ್ಮ ರಾಹುಲ್ ಗಾಂಧೀಜಿ ಅವರು, ದೇಶದ ಪ್ರಧಾನ ಮಂತ್ರಿ ಅವರ ವಿರುದ್ಧ ಬಳಸಿರುವ ಪದ ಹಾಗೂ ಹೇಳಿಕೆಯನ್ನು ಖಂಡಿಸುವುದಾಗಿ ತಿಳಿಸಿದ್ದರು. ಏತನ್ಮಧ್ಯೆ ಸ್ಪೀಕರ್ ಬಿರ್ಲಾ ಅವರು, ಉತ್ತರ ಮಾತ್ರ ನೀಡಿ ಎಂದು ಸೂಚನೆ ನೀಡಿದ್ದರು.
ನಂತರವೂ ಆರೋಗ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಖಂಡಿಸುವ ಪ್ರಕಟಣೆ ಓದುವುದನ್ನು ಮುಂದುವರಿಸಿದಾಗ ಕಾಂಗ್ರೆಸ್ ಸದಸ್ಯರು ಸದನದ ಬಾವಿ ಬಳಿ ತೆರಳಿ ಪ್ರತಿಭಟನೆ ನಡೆಸಿದರು. ತೀವ್ರ ಕೋಲಾಹಲ, ಗದ್ದಲ ಏರ್ಪಟ್ಟಾಗ ಸ್ಪೀಕರ್ ಅವರು ಕಲಾಪವನ್ನು ಮುಂದೂಡಿದ್ದರು.
ಸದನದ ಬಾವಿ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲವು ಬಿಜೆಪಿ ಸಂಸದರು ಕೈ, ಕೈ ಮಿಲಾಯಿಸಿ, ಒಬ್ಬರು ಸಂಸದರು ಕೊಲ್ಲುವುದಾಗಿ ಬೆದರಿಯೊಡ್ಡಿರುವುದಾಗಿ ಕಾಂಗ್ರೆಸ್ ಸಂಸದರು ದೂರಿದ್ದಾರೆ.
ಸ್ಪೀಕರ್ ಓಂ ಬಿರ್ಲಾ ಅವರು ಸಿಸಿಟಿವಿ ಫೂಟೇಜ್ ಅನ್ನು ಪರಿಶೀಲಿಸಿ ತಕ್ಷಣವೇ ಯಾರು ಕೈ, ಕೈ ಮಿಲಾಯಿಸಿದ್ದಾರೋ ಆ ಸಂಸದರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕಂ ಟಾಗೋರ್ ತಿಳಿಸಿದರು.
ನಂತರ ಉತ್ತರ ಪ್ರದೇಶ ಬಿಜೆಪಿ ಸಂಸದ ಬ್ರಿಜಿಭೂಷಣ್ ಸಿಂಗ್ ಅವರು ಕಾಂಗ್ರೆಸ್ ಸಂಸದ ಮಾಣಿಕಂ ವಿರುದ್ಧ ದೂರು ನೀಡಿರುವುದಾಗಿ ಪಿಟಿಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ