ಪೊಲೀಸರಿಗೇ ಮರಣ ದಂಡನೆ !
Team Udayavani, Jul 26, 2018, 6:00 AM IST
ತಿರುವನಂತಪುರ: ಹನ್ನೊಂದು ವರ್ಷಗಳ ಹಿಂದೆ ಪೊಲೀಸ್ ಕಸ್ಟಡಿಯಲ್ಲಿ ಕಳ್ಳತನ ಪ್ರಕರಣದ ಆರೋಪಿ ಉದಯ ಕುಮಾರ್ ಅಸುನೀಗಿದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐನ ವಿಶೇಷ ಕೋರ್ಟ್ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮರಣ ದಂಡನೆ ಶಿಕ್ಷೆ ನೀಡಿದೆ. ಸಹಾಯಕ ಸಬ್-ಇನ್ಸ್ಪೆಕ್ಟರ್ ಕೆ. ಜಿತ ಕುಮಾರ್, ಪೊಲೀಸ್ ಅಧಿಕಾರಿ ಎಸ್.ವಿ. ಶ್ರೀಕುಮಾರ್ಗೆ ಗಲ್ಲುಶಿಕ್ಷೆ ವಿಧಿಸಲಾಗಿದೆ. ಅವರಿಗೆ 2 ಲಕ್ಷ ರೂ. ದಂಡವನ್ನೂ ವಿಧಿಸಲಾಗಿದೆ. ತೀರ್ಪು ನೀಡುವ ಸಂದರ್ಭ ವಿಶೇಷ ಕೋರ್ಟ್ನ ನ್ಯಾಯಾಧೀಶ ಜೆ. ನಝೀರ್, “ಆರೋಪಿಗಳು ನಡೆಸಿದ ಕೃತ್ಯ ಘೋರವಾಗಿದೆ’ ಎಂದು ಹೇಳಿದ್ದಾರೆ.
ಸಾಕ್ಷಿ ನಾಶ ಮತ್ತು ಸಂಚು ಹೂಡಿದ ಆರೋಪದಲ್ಲಿ ಟಿ.ಕೆ. ಹರಿದಾಸ್, ಇ.ಕೆ. ಸಬು ಮತ್ತು ಅಜಿತ್ ಕುಮಾರ್ಗೆ ಮೂರು ವರ್ಷಗಳ ಶಿಕ್ಷೆ ವಿಧಿಸಲಾಗಿದೆ. ಹರಿದಾಸ್ ಸದ್ಯ ಡೆಪ್ಯುಟಿ ಸೂಪರಿಂಟೆಂಡೆಂಟ್ ಮಟ್ಟದ ಅಧಿಕಾರಿಯಾಗಿದ್ದು, ಇತರ ಇಬ್ಬರು ಪೊಲೀಸ್ ಸೂಪರಿಂಟೆಂಡೆಂಟ್ ಆಗಿದ್ದಾರೆ. ಪ್ರಕರಣದ ಇನ್ನೊಬ್ಬ ಆರೋಪಿ ಕೆ.ವಿ. ಸೋಮನ್ ವಿಚಾರಣೆ ವೇಳೆ ಸಾವನ್ನಪ್ಪಿದ್ದು, ವಿ.ಪಿ.ಮೋಹನನ್ ವಿರುದ್ಧದ ಆರೋಪ ಸಾಬೀತಾಗಿಲ್ಲ. ಎಲ್ಲ ಆರೋಪಿಗಳಿಗೆ ಕೋರ್ಟ್ 5 ಸಾವಿರ ರೂ. ದಂಡವನ್ನೂ ವಿಧಿಸಿದೆ. ಈ ಪ್ರಕರಣ 2005ರಲ್ಲಿ ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ