ಇರಾನ್-ಅಮೆರಿಕ ನಡುವಿನ ಸಂಘರ್ಷ ಶಮನಕ್ಕೆ ಭಾರತ ಮುಂದಾಗಬೇಕು: ರಾಯಭಾರಿ ಅಲಿ
ಇರಾನ್ ಗೆ ಯುದ್ಧ ಬೇಕಾಗಿಲ್ಲ. ನಾವು ಯುದ್ಧ ಪರಿಸ್ಥಿತಿಯನ್ನು ಎದುರು ನೋಡುತ್ತಿಲ್ಲ.
Team Udayavani, Jan 8, 2020, 7:01 PM IST
ನವದೆಹಲಿ: ಪರ್ಷಿಯನ್ ಗಲ್ಫ್ ರಾಷ್ಟ್ರದಲ್ಲಿ ತಲೆದೋರಿರುವ ಸಂಘರ್ಷವನ್ನು ಶಾಂತಿ ಮಾತುಕತೆ ಮೂಲಕ ಶಮನಗೊಳಿಸುವ ನಿಟ್ಟಿನಲ್ಲಿ ಭಾರತ ಮಹತ್ವದ ಪಾತ್ರವಹಿಸಬೇಕು ಎಂದು ಭಾರತದಲ್ಲಿರುವ ಇರಾನ್ ರಾಯಭಾರಿ ಅಲಿ ಚೇಗೇನಿ ಬುಧವಾರ ಮನವಿ ಮಾಡಿಕೊಂಡಿದ್ದಾರೆ.
ಭಾರತ ಕೂಡ ಗಲ್ಫ್ ರಾಷ್ಟ್ರದ ಭಾಗವಾಗಿದೆ. ಹೀಗಾಗಿ ಭಾರತ ಉದ್ವಿಗ್ನ ಶಮನಗೊಳಿಸುವಲ್ಲಿ ಪಾತ್ರವಹಿಸಬೇಕು. ನಮ್ಮ ಉತ್ತಮ ಗೆಳೆಯನಾಗಿರುವ ಭಾರತ ಸಂಘರ್ಷ ಶಮನಗೊಳಿಸುವ ಯಾವುದೇ ಹೆಜ್ಜೆ ಇಟ್ಟರೂ ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಇರಾನ್ ಗೆ ಯುದ್ಧ ಬೇಕಾಗಿಲ್ಲ. ನಾವು ಯುದ್ಧ ಪರಿಸ್ಥಿತಿಯನ್ನು ಎದುರು ನೋಡುತ್ತಿಲ್ಲ. ನಾವು ಪರ್ಷಿಯನ್ ಪ್ರದೇಶದಲ್ಲಿ ಭಾರತೀಯರು ಸೇರಿದಂತೆ ಎಲ್ಲರ ಜತೆಯೂ ಸಹೋದರತೆಯಿಂದ ಶಾಂತಿಯುತವಾಗಿ ಬದುಕಬೇಕಾಗಿದೆ. ನಮಗೆ ಯಾವುದೇ ಸಂಘರ್ಷ ಬೇಕಾಗಿಲ್ಲ ಎಂದು ಅಲಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಇರಾನ್ ಮತ್ತು ಅಮೆರಿಕ ನಡುವೆ ತಲೆದೋರಿರುವ ಯುದ್ಧ ಕಾರ್ಮೋಡದ ಹಿನ್ನೆಲೆಯಲ್ಲಿ ಅಲಿ ನವದೆಹಲಿಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಮತ್ತೊಂದೆಡೆ ಇರಾನ್, ಅಮೆರಿಕದ ಸಂಘರ್ಷದ ಪರಿಸ್ಥಿತಿ ಕುರಿತು ಭಾರತ ತನ್ನ ನಿಲುವು ವ್ಯಕ್ತಪಡಿಸಬೇಕು ಎಂಬ ಒತ್ತಾಯವೂ ಕೇಳಿಬಂದಿರುವುದಾಗಿ ವರದಿ ತಿಳಿಸಿದೆ.
ಇರಾನ್ ಜನರಲ್ ಕಮಾಂಡರ್ ಖಾಸಿಂ ಸೊಲೆಮನಿಯನ್ನು ಅಮೆರಿಕ ವಾಯುಪಡೆ ದಾಳಿ ನಡೆಸಿ ಹತ್ಯೆಗೈದಿದ್ದಕ್ಕೆ ಪ್ರತೀಕಾರವಾಗಿ ಇರಾನ್ ಬುಧವಾರ ನಸುಕಿನ ವೇಳೆ ಇರಾಕ್ ನಲ್ಲಿರುವ ಅಮೆರಿಕ ಪಡೆಗಳ ಮೇಲೆ ಮಿಸೈಲ್ ದಾಳಿ ನಡೆಸಿತ್ತು. ಘಟನೆಯಲ್ಲಿ 80 ಮಂದಿ ಅಮೆರಿಕದ ಸೈನಿಕರು ಸಾವನ್ನಪ್ಪಿರುವುದಾಗಿ ಇರಾನ್ ಸ್ವಾಮಿತ್ವದ ಟೆಲಿವಿಷನ್ ಸುದ್ದಿ ಬಿತ್ತರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ