ಉತ್ತರಪ್ರದೇಶ: ದೇವಾಲಯದ ವೃದ್ಧ ಅರ್ಚಕರೊಬ್ಬರ ಬರ್ಬರ ಹತ್ಯೆ
Team Udayavani, Aug 6, 2022, 2:30 PM IST
ಬಿಜ್ನೂರ್ : ಶೇರ್ ಕೋಟ್ ಎಂಬಲ್ಲಿ ದೇವಾಲಯದ ವೃದ್ಧ ಅರ್ಚಕರೊಬ್ಬರನ್ನು ಶನಿವಾರ ಬೆಳಗಿನ ಜಾವಾ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆಗೈದ ಘಟನೆ ನಡೆದಿದೆ.
ಎಸ್ ಪಿ ದಿನೇಶ್ ಸಿಂಗ್ ಅವರು ಹತ್ಯೆಯ ಕುರಿತು ವಿವರ ನೀಡಿದ್ದು, ಬೆಗ್ರಾಮ್ ಎಂಬ 70 ವರ್ಷ ವಯಸ್ಸಿನ ಅರ್ಚಕ ಮನೋಕಾಮನಾ ಮಂದಿರದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸುತ್ತಿದ್ದ ವೇಳೆ ಬೆಳಗಿನ ಜಾವ 4.30ರ ಸುಮಾರಿಗೆ ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಬೆಗ್ರಾಮ್ ಅವರು ಕೂಗುತ್ತಿದ್ದಂತೆ, ಅವರ ಪತ್ನಿ ಹೊರಗೆ ಬಂದಿದ್ದು, ಅಷ್ಟರಲ್ಲಾಗಲೇ ದಾಳಿಕೋರರು ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಬೆಗ್ರಾಮ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಘಟನೆಯ ತನಿಖೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ