ಉ.ಪ್ರ. ಬಿಜೆಪಿ ಶಾಸಕನ ಪುತ್ರನಿಂದ ಅತ್ಯಾಚಾರ ? ಮಹಿಳೆಯಿಂದ ಧರಣಿ
Team Udayavani, May 8, 2018, 12:03 PM IST
ಲಕ್ನೋ : ಉತ್ತರ ಪ್ರದೇಶದಲ್ಲಿ ಜನರು ”ಸರಕಾರ ಬದಲಿಸಿ ಬಿಜೆಪಿಯನ್ನು ಗೆಲ್ಲಿಸಿ”ದರೂ ರಾಜ್ಯನದಲ್ಲಿನ ಗೂಂಡಾ ರಾಜ್ಯದ ಕ್ರಿಮಿನಲ್ ಅಧ್ಯಾಯ ಹಿಂದಿನಂತೆಯೇ ಮುಂದುವರಿದಿರುವುದಕ್ಕೆ ಸಾಕ್ಷಿ ಎಂಬಂತೆ ಇದೀಗ ಬಿಜೆಪಿಯ ಶಾಸಕ ಪುತ್ರ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಿ ಮಹಿಳೆಯೊಬ್ಬರು ಶಹಜಹಾನ್ಪುರ ಜಿಲ್ಲಾಧಿಕಾರಿ ಕಚೇರಿ ಮುಂದೆ ನ್ಯಾಯ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಎಎನ್ಐ ವರದಿಯ ಪ್ರಕಾರ ಪೊಲೀಸರು ಆರೋಪಿ ಅತ್ಯಾಚಾರಿ ಶಾಸಕ-ಪುತ್ರನ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ. ಆದರೆ ಒಟ್ಟು ಪ್ರಕರಣದ ವಿವರಗಳು ಇನ್ನೂ ಗೊಂದಲಕಾರಿಯಾಗಿವೆ ಎಂದು ವರದಿಗಳು ತಿಳಿಸಿವೆ.
ಉತ್ತರ ಪ್ರದೇಶದ ಉನ್ನಾವೋ ರೇಪ್ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಜೈಲುಪಾಲಾಗಿರುವ ಘಟನೆ ಜನಮನದಲ್ಲಿ ಹಸಿರಾಗಿರುವಾಗಲೇ ಇನ್ನೋರ್ವ ಬಿಜೆಪಿ ಶಾಸಕ ಈಗ ವಿವಾದಕ್ಕೆ ಗುರಿಯಾಗಿರುವುದು ಗಮನಾರ್ಹವಾಗಿದೆ. ಈ ಹೊಸ ಪ್ರಕರಣದಲ್ಲಿ ಬಿಜೆಪಿ ಶಾಸಕನ ಪುತ್ರನ ವಿರುದ್ಧ ಅತ್ಯಾಚಾರದ ದೂರು ದಾಖಲಾಗಿದೆ.
ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ನನ್ನು ಸಿಬಿಐ ಬಂಧಿಸಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ಜಮ್ಮು ಕಾಶ್ಮೀರದ ಕಥುವಾ ರೇಪ್ ಆ್ಯಂಡ್ ಮರ್ಡರ್ ಕೇಸಿನಷ್ಟೇ ಮಹತ್ವವನ್ನು ಈ ಪ್ರಕರಣ ಪಡೆದುಕೊಂಡು ದೇಶಾದ್ಯಂತ ವ್ಯಾಪಕ ಟೀಕೆ, ಖಂಡನೆಗೆ ಗುರಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್