ಐಎಸ್ಐಗೆ ಗೌಪ್ಯ ಮಾಹಿತಿ: ಭಾರತೀಯನ ಬಂಧನ
Team Udayavani, May 25, 2018, 6:00 AM IST
ಲಕ್ನೋ: ಪಾಕಿಸ್ಥಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ಭಾರತೀಯ ರಾಜ ತಾಂತ್ರಿಕ ಅಧಿಕಾರಿಯೊಬ್ಬರ ಮನೆಯಲ್ಲಿ ಗೂಢಚರ್ಯೆ ನಡೆಸಿದ ಆರೋಪದ ಮೇರೆಗೆ ಉತ್ತರಾಖಂಡದಲ್ಲಿ ವ್ಯಕ್ತಿಯೊಬ್ಬನನ್ನು ಉಗ್ರ ನಿಗ್ರಹ ದಳ (ಎಟಿಎಸ್) ವಶಕ್ಕೆ ಪಡೆದಿದೆ.
ಪಿಥೋರ್ ಗಢ ಜಿಲ್ಲೆಯ ದೀದಿ ಹತ್ನಲ್ಲಿ ವಾಸ್ತವ್ಯ ಹೂಡಿದ್ದ ಈತನನ್ನು ಎಟಿಎಸ್ ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆಗಾಗಿ ಲಕ್ನೋಗೆ ಕರೆದೊಯ್ದಿದೆ. 2015ರಿಂದ 2017ರವರೆಗೆ ಇಸ್ಲಾಮಾಬಾದ್ನ ಭಾರತೀಯ ರಾಜ ತಾಂತ್ರಿಕ ಅಧಿಕಾರಿಯೊಬ್ಬರ ಮನೆಯಲ್ಲಿ ಅಡುಗೆ ಭಟ್ಟನಾಗಿ ರಮೇಶ್ ಸಿಂಗ್ ಕನ್ಯಾಲ್(35) ಕೆಲಸ ಮಾಡುತ್ತಿದ್ದ. ಆ ಅವಧಿಯಲ್ಲಿ ಭಾರತಕ್ಕೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಹಣದಾಸೆಗಾಗಿ ಪಾಕಿಸ್ತಾನದ ಗುಪ್ತಚರ ಇಲಾಖೆಯಾದ ಐಎಸ್ಐಗೆ ರವಾನಿಸಿದ್ದಾನೆ ಎಂಬ ಆರೋಪ ಈತನ ಮೇಲಿದೆ. ಇತ್ತೀಚೆಗಷ್ಟೇ, ಇಸ್ಲಾಮಾಬಾದ್ನಿಂದ ಭಾರತಕ್ಕೆ ಹಿಂದಿರುಗಿದ ನಂತರ, ಪಿಥೋರ್ಗಢದಲ್ಲಿ ವಾಸ್ತವ್ಯ ಹೂಡಿದ್ದ ಎನ್ನಲಾಗಿದೆ.
ಕಲ್ಯಾನ್ ತಪಾಸಣೆ ವೇಳೆ ಆತನ ಬಳಿ ಪಾಕಿಸ್ತಾನದ ಕ್ಯೂ-ಮೊಬೈಲ್ ಕಂಪನಿಯ ಮೊಬೈಲ್ ಇರುವುದು ಪತ್ತೆಯಾಗಿದೆ. ಸೇವಾವಧಿ ಮುಗಿಸಿ ಭಾರತಕ್ಕೆ ಹಿಂದಿರುಗುವಾಗ ಐಎಸ್ಐ ಸಂಸ್ಥೆಯು ಭಾರತದಿಂದಲೂ ಗೂಢ ಚರ್ಯೆ ಮಾಡಲು ಅನುಕೂಲವಾಗುವಂತೆ ಈ ಫೋನ್ ನೀಡಿತ್ತೆನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು