ಸಿಬಿಆರ್ಐ ತಂಡದಿಂದ ಜೋಶಿಮಠ ಸ್ಥಳ ಪರಿಶೀಲನೆ
ಅಪಾಯಕಾರಿ ವಲಯದಲ್ಲಿರುವ ಕಟ್ಟಡಗಳಿಗೆ ಕೆಂಪು ಬಣ್ಣದ ಮಾರ್ಕ್
Team Udayavani, Jan 9, 2023, 9:57 PM IST
ಜೋಶಿಮಠ: ಉತ್ತರಾಖಂಡದ ಜೋಶಿಮಠದ ಪರಿಸ್ಥಿತಿ ಕುರಿತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ(ಎನ್ಡಿಎಂಎ) ಅಧಿಕಾರಿಗಳೊಂದಿಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಸೋಮವಾರ ಸಭೆ ನಡೆಸಿದರು.
ಇನ್ನೊಂದೆಡೆ, ಕೇಂದ್ರೀಯ ಕಟ್ಟಡ ಸಂಶೋಧನಾ ಸಂಸ್ಥೆಯ(ಸಿಬಿಆರ್ಐ) ತಜ್ಞರ ತಂಡ ಜೋಶಿಮಠ ತಲುಪಿದ್ದು, ಪರಿಶೀಲನೆ ನಡೆಸಿದೆ. ಅಪಾಯಕಾರಿ ವಲಯದಲ್ಲಿರುವ ಕಟ್ಟಡಗಳಿಗೆ ಕೆಂಪು ಬಣ್ಣದ ಮಾರ್ಕ್ ಹಾಕಿದ್ದು, ಬಿರುಕು ಬಿಟ್ಟ ಮನೆಗಳನ್ನು ಪರಿಶೀಲಿಸಿದೆ.
ಅಲ್ಲದೇ ಉತ್ತರಾಖಂಡ ಸರ್ಕಾರಕ್ಕೆ ಸೋಮವಾರವೇ ಸಿಬಿಆರ್ಐ ವರದಿ ಸಲ್ಲಿಸಿದೆ. ಮತ್ತೊಂದೆಡೆ,ಜೋಶಿಮಠದಲ್ಲಿ ಉದ್ಭವಿಸಿರುವ ಆಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನ್ಯಾಯಾಲಯದ ಮಧ್ಯಪ್ರವೇಶ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಮಂಗಳವಾರವೇ ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ನಮೂದಿಸಲು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಜೋಶಿಮಠದ ಭೂಕುಸಿತದ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಬೇಕು. ತಜ್ಞರು ಮತ್ತು ಪರಿಸರವಾದಿಗಳು ವರದಿ ಸಲ್ಲಿಸುವವರೆಗೆ ಪ್ರದೇಶದ ಎಲ್ಲಾ ಅಭಿವೃದ್ಧಿ ಯೋಜನೆಗಳನ್ನು ಸ್ಥಗಿತಗೊಳಿಸಬೇಕು ಎಂದು ಇದೇ ವೇಳೆ ಕಾಂಗ್ರೆಸ್ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ