ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
Team Udayavani, May 23, 2022, 9:44 PM IST
ನವದೆಹಲಿ: ಉತ್ತರಾಖಂಡದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯು ಕೇದಾರನಾಥ ಯಾತ್ರೆಗೆ ತೊಡಕುಂಟುಮಾಡಿದೆ. ಬಿರುಗಾಳಿ, ಧಾರಾಕಾರ ಮಳೆ ಹಾಗೂ ದಟ್ಟ ಮಂಜು ಸುರಿಯುತ್ತಿರುವ ಕಾರಣ ಕೇದಾರನಾಥ ಯಾತ್ರೆಯನ್ನು ಸೋಮವಾರ ಸ್ಥಗಿತಗೊಳಿಸಲಾಗಿದೆ.
ಆದರೆ, ಸದ್ಯಕ್ಕೆ ಗಂಗೋತ್ರಿ, ಯಮುನೋತ್ರಿ, ಹೇಮಕುಂಡ್ ಸಾಹಿಬ್ ಮತ್ತು ಬದ್ರಿನಾಥ ಯಾತ್ರೆ ಮುಂದುವರಿದಿದೆ. ಮಳೆ ಹೆಚ್ಚುತ್ತಿರುವ ಕಾರಣ, ಉಖಿಮಠ, ಸೋನ್ಪ್ರಯಾಗ್, ಗೌರಿಕುಂಡ್ ತಲುಪಿರುವ ಯಾತ್ರಿಗಳಿಗೆ ಅಲ್ಲೇ ಇರುವಂತೆ ಸೂಚಿಸಲಾಗಿದೆ.
ಸುಮಾರು 10 ಸಾವಿರ ಯಾತ್ರಿಗಳು ಯಾತ್ರೆ ಪುನಾರಂಭಕ್ಕಾಗಿ ಕಾಯುತ್ತಿದ್ದಾರೆ. ಆದರೆ ಅವರ ಸುರಕ್ಷತೆಯೇ ನಮಗೆ ಮುಖ್ಯ ಎಂದು ವಿಪತ್ತು ನಿರ್ವಹಣಾ ಅಧಿಕಾರಿ ಎನ್ಕೆ ರಾಜ್ವಾರ್ ಹೇಳಿದ್ದಾರೆ.
ಸಿಲುಕಿಕೊಂಡ ಯಾತ್ರಿಗಳು:
ಮಧ್ಯಪ್ರದೇಶದ ಮೈಹಾರ್ ಹಿಲ್ನಲ್ಲಿ ಮಾ ಶಾರದಾ ದೇವಿ ದೇಗುಲಕ್ಕೆಂದು ಬಂದಿದ್ದ 28 ಮಂದಿ ಯಾತ್ರಿಗಳು ರೋಪ್ವೇ ಟ್ರಾಲಿಯಲ್ಲಿ ಸಿಲುಕಿಕೊಂಡ ಘಟನೆ ಸೋಮವಾರ ನಡೆದಿದೆ. ಭಾರೀ ಗಾಳಿ ಮಳೆಯಿಂದಾಗಿ ರೋಪ್ವೇ ಸಂಚಾರ ಸ್ಥಗಿತಗೊಂಡ ಕಾರಣ, ಅವರು 40 ನಿಮಿಷಗಳ ಕಾಲ ಅಲ್ಲೇ ಬಾಕಿಯಾಗಿದ್ದು, ಕೊನೆಗೆ ರಕ್ಷಿಸಲಾಗಿದೆ.
ದೆಹಲಿಯಲ್ಲಿ ಭಾರೀ ಮಳೆ
ಭಾನುವಾರದಿಂದೀಚೆಗೆ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಕಡೆ ಮನೆಗಳಿಗೆ ಹಾನಿಯಾಗಿದ್ದು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೇ ವೇಳೆ, ಅಸ್ಸಾಂನಲ್ಲಿ ಮಳೆ-ಪ್ರವಾಹ ಪರಿಸ್ಥಿತಿ ಇಳಿಮುಖವಾಗಿದೆ. ಆದರೆ, ಸೋಮವಾರ ಮತ್ತೆ 6 ಮಂದಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್