ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ಗೆ ಕೋವಿಡ್ 19 ಸೋಂಕು ದೃಢ; ಏಮ್ಸ್ ಗೆ ದಾಖಲು
ರಾವತ್ ಅವರ ಆರೋಗ್ಯ ಬಗ್ಗೆ ವೈದ್ಯರ ತಂಡ ತಪಾಸಣೆ ನಡೆಸುತ್ತಿದೆ
Team Udayavani, Dec 28, 2020, 1:35 PM IST
ಡೆಹ್ರಾಡೂನ್: ಇತ್ತೀಚೆಗಷ್ಟೇ ಕೋವಿಡ್ 19 ಸೋಂಕು ದೃಢಪಟ್ಟಿದ್ದ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಡೆಹ್ರಾಡೂನ್ ನ ಸರ್ಕಾರಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯದಲ್ಲಿ ಏರುಪೇರಾದ ಕಾರಣ ರಾವತ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಸೋಮವಾರ(ಡಿಸೆಂಬರ್ 28, 2020) ಡಾ.ಅಶುತೋಷ್ ರಾಣಾ ತಿಳಿಸಿದ್ದಾರೆ.
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಭಾನುವಾರ(ಡಿ.27, 2020) ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ವೈದ್ಯರು ರಾವತ್ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿರುವುದಾಗಿ ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.
ಮುಖ್ಯಮಂತ್ರಿ ರಾವತ್ ಅವರಿಗೆ ಹೃದಯದಲ್ಲಿ ಸೋಂಕು ಪತ್ತೆಯಾಗಿರುವುದಾಗಿ ವೈದ್ಯ ಡಾ.ಎನ್ ಎಸ್ ಬಿಷತ್ ತಿಳಿಸಿದ್ದಾರೆ. ರಾವತ್ ಅವರ ಆರೋಗ್ಯ ಬಗ್ಗೆ ವೈದ್ಯರ ತಂಡ ತಪಾಸಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿಸೆಂಬರ್ 18ರಂದು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಕೋವಿಡ್ 19 ಸೋಂಕು ಪತ್ತೆಯಾದ ನಂತರ ಮನೆಯಲ್ಲಿಯೇ ಐಸೋಲೇಶನ್ ನಲ್ಲಿ ಇದ್ದಿದ್ದರು. ಸಿಎಂ ಪತ್ನಿ ಹಾಗೂ ಮಗಳಿಗೂ ಕೋವಿಡ್ 19 ಪಾಸಿಟಿವ್ ವರದಿ ಬಂದಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ