ಉತ್ತರಾಖಂಡದಲ್ಲಿ ಹಿಮಸ್ಪೋಟ: 10 ಮೃತದೇಹ ಪತ್ತೆ, 150 ಮಂದಿ ಕಣ್ಮರೆ, 16 ಜನರ ರಕ್ಷಣೆ
Team Udayavani, Feb 7, 2021, 5:50 PM IST
ನವದೆಹಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರೀ ಹಿಮಪಾತವಾಗುತ್ತಿರುವುದರಿಂದ ದೌಲಿ ಗಂಗಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು 150 ಕ್ಕಿಂತ ಹೆಚ್ಚು ಜನ ಕಾರ್ಮಿಕರು ಕಣ್ಮರೆಯಾಗಿದ್ದಾರೆ ಎಂದು ವರದಿಯಾಗಿದೆ.
ಕಾಣೆಯಾದ ಕಾರ್ಮಿಕರೆಲ್ಲರೂ ವಿದ್ಯುತ್ ಯೋಜನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಾಥಮಿಕ ವರದಿಯ ಪ್ರಕಾರ 10 ಜನರು ಮೃತಪಟ್ಟಿದ್ದು, 16 ಮಂದಿಯನ್ನು ರಕ್ಷಿಸಲಾಗಿದೆಯೆಂದು ತಿಳಿದುಬಂದಿದೆ.
ರಿಶಿಗಂಗಾ ವಿದ್ಯುತ್ ಯೋಜನೆಯಡಿಯಲ್ಲಿ 150 ಕಾರ್ಮಿಕರು ತಪೋವನ್-ರೇನಿಯಲ್ಲಿ ಕೆಲಸಮಾಡುತ್ತಿದ್ದು, ಈಗಾಗಲೇ 10 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಪ್ರವಾಹ ಪರಿಸ್ಥಿತಿ ತಲೆದೋರಿದ್ದರಿಂದ ಸುತ್ತಮುತ್ತಲಿನ ಗ್ರಾಮಸ್ಥರ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದ್ದು, ITBP ತಂಡ, SDRF ಮತ್ತು NDRF ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಐಎಎಫ್ ಮತ್ತು ಸೇನಾ ಪಡೆ ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಕೈಜೋಡಿಸಿದೆ.
ತಪೋವನ್ ಡ್ಯಾಂ ಬಳಿ ಸಿಲುಕಿದ್ದ 16 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ.
#UPDATE: ITBP rescues all 16 people who were trapped in the tunnel near Tapovan, Chamoli. #Uttarakhand https://t.co/vi2ZbTyB9N
— ANI (@ANI) February 7, 2021
ಉತ್ತರಾಖಂಡದ ಘಟನೆಯ ಬಗ್ಗೆ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಭಾರತವು ಉತ್ತರಾಖಂಡ ರಾಜ್ಯದ ಜೊತೆಗಿದೆ. ಅಲ್ಲಿನ ಪ್ರತಿಯೊಬ್ಬರ ಸುರಕ್ಷತೆಗಾಗಿ ದೇಶವು ಪ್ರಾರ್ಥಿಸುತ್ತದೆ. ಹಿರಿಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಮಾತನಾಡುತ್ತಿದ್ದು, ಎನ್ಡಿಆರ್ಎಫ್, ರಕ್ಷಣಾ ಕಾರ್ಯ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತು ಸತತ ಮಾಹಿತಿ ಪಡೆಯುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Uttarakhand is facing a disaster. I am in touch with State CM Trivendra Rawat ji, Union Home Minister and NDRF officers. The rescue operations are underway: PM Modi in Haldia, West Bengal pic.twitter.com/7BFXLGE72K
— ANI (@ANI) February 7, 2021
150ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ: ಈಗಾಗಲೇ 10 ಮೃತದೇಹಗಳನ್ನು ನದಿಯಿಂದ ಹೊರಕ್ಕೆ ತೆಗೆಯಲಾಗಿದ್ದು, ಉಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ದುರ್ಘಟನೆಯ ವೇಳೆ 150ಕ್ಕಿಂತ ಹೆಚ್ಚು ಕಾರ್ಮಿಕರು ಸ್ಥಳದಲ್ಲಿದ್ದರು ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!