Uttarakhand;ದ್ವೇಷ ಭಾಷಣ: ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
Team Udayavani, Jun 15, 2023, 6:34 AM IST
ಹೊಸದಿಲ್ಲಿ: ಉತ್ತರಾಖಂಡದಲ್ಲಿ ಹಿಂದೂ ಸಂಘಟನೆಗಳು ಕರೆ ನೀಡಿರುವ “ಮಹಾ ಪಂಚಾಯತ್’ ತಡೆಯುವಂತೆ ಮತ್ತು ನಿರ್ದಿಷ್ಟ ಸಮುದಾಯದವರನ್ನು ಗುರಿಯಾಗಿಸಿ ಮಾಡುವ ದ್ವೇಷ ಭಾಷಣಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನ್ಯಾ| ವಿಕ್ರಮ್ ನಾಥ್ ಮತ್ತು ನ್ಯಾ| ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ರಜಾ ಕಾಲದ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ. ಇದೇ ವೇಳೆ, “ಮಹಾ ಪಂಚಾಯತ್’ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ ಕೈಗೆತ್ತಿಗೊಳ್ಳಲಿದೆ.