ಗರ್ಭಿಣಿ ಅತ್ಯಾಚಾರ ಸಂತ್ರಸ್ತೆಯನ್ನು ಸಜೀವ ದಹಿಸಿದ ದುರುಳರು: ಯುಪಿಯಲ್ಲೊಂದು ಹೀನ ಕೃತ್ಯ
ಅತ್ಯಾಚಾರವೆಸಗಿದ ಯುವಕನ ಮನೆಯವರಿಂದಲೇ ಹೀನಾಯ ಕೃತ್ಯ
Team Udayavani, Oct 9, 2022, 11:42 AM IST
ಉತ್ತರ ಪ್ರದೇಶ : ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾದ ಗರ್ಭಿಣಿ ಬಾಲಕಿಯನ್ನು ಬೆಂಕಿ ಹಚ್ಚಿ ಸಜೀವ ದಹನ ಮಾಡಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯ ಕುರವಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆ ವಿವರ : ಮೂರು ತಿಂಗಳ ಹಿಂದೆ ಮೈನ್ಪುರಿ ಜಿಲ್ಲೆಯ ಕುರವಲಿ ಗ್ರಾಮದಲ್ಲಿ ವಾಸಿಸುವ ಅಭಿಷೇಕ್ ಎಂಬಾತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆದರೆ ಈ ವಿಚಾರವನ್ನು ಬಾಲಕಿ ತನ್ನ ಮನೆಯವರಲ್ಲಿ ಹೇಳಿರಲಿಲ್ಲ, ಬಳಿಕ ಸಂತ್ರಸ್ತ ಬಾಲಕಿಗೆ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದಾಗ ಗರ್ಭಿಣಿಯಾಗಿರುವುದು ಗೊತ್ತಾಗಿದೆ ಬಳಿಕ ಮನೆಯವರು ಊರಿನ ದೊಡ್ಡ ವ್ಯಕ್ತಿಗಳನ್ನು ಕರೆದು ಪಂಚಾಯತಿ ಕರೆದು ಸಭೆ ನಡೆಸಿ ಅತ್ಯಾಚಾರವೆಸಗಿದ ಯುವಕನ ಜೊತೆ ಮದುವೆ ಮಾಡಿಸುವ ನಿರ್ಧಾರಕ್ಕೆ ಬಂದಿದ್ದಾರೆ.
ಈ ವೇಳೆ ಯುವಕನ ತಾಯಿ ಸಂತ್ರಸ್ತೆ ಯುವತಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗುವುದಾಗಿ ಹೇಳಿದ್ದಾರೆ ಅದರಂತೆ ಮಗಳನ್ನು ಯುವಕ ಮತ್ತು ಆತನ ತಾಯಿ ಜೊತೆ ಕಳುಹಿಸಿಕೊಟ್ಟಿದ್ದಾರೆ, ಆದರೆ ವಿಧಿಯಾಟ ಬೇರೇನೇ ಆಗಿತ್ತು, ಮನೆಗೆ ಕರೆದುಕೊಂಡು ಹೋದ ಯುವಕನ ತಾಯಿ ಸಂತ್ರಸ್ತ ಬಾಲಕಿಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ ಅಲ್ಲದೆ ಈ ಕೃತ್ಯಕ್ಕೆ ಯುವಕನೂ ಸಾಥ್ ನೀಡಿದ್ದಾನೆ.
ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಲ್ಲಿ ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪಿದ್ದಾಳೆ.
ಘಟನೆ ಕುರಿತು ಬಾಲಕಿಯ ತಾಯಿ ಠಾಣೆಗೆ ದೂರು ನೀಡಿದ್ದು, ಕೃತ್ಯಕ್ಕೆ ಸಂಬಂಧಿಸಿ ಪೊಲೀಸರು ಮೂವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಹಳೆ ಪರವಾನಿಗೆಯಲ್ಲಿ ಬಸ್ ಓಡಿಸಲು ಮುಂದಾದ ಕೆ.ಎಸ್.ಆರ್.ಟಿ.ಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ