ಅನೈತಿಕ ಸಂಬಂಧ ಶಂಕೆ: ಪತ್ನಿಯನ್ನೇ ಕೊಂದು ದೇಹದ ಭಾಗಗಳನ್ನು ತುಂಡರಿಸಿ ಎಸೆದ ಪತಿ
Team Udayavani, Nov 24, 2022, 10:11 AM IST
ಉತ್ತರ ಪ್ರದೇಶ : ರಾಷ್ಟ್ರ ರಾಜಧಾನಿಯಲ್ಲಿ ಶ್ರದ್ಧಾ ವಾಕರ್ ಭೀಕರ ಹತ್ಯೆಯ ಪ್ರಕರಣ ಮಾಸುವ ಮುನ್ನವೇ ಉತ್ತರ ಪ್ರದೇಶದ ಸೀತಾಪುರದಲ್ಲಿ ಅಂತಹುದೇ ಪ್ರಕರಣವೊಂದು ಮುನ್ನೆಲೆಗೆ ಬಂದಿದೆ.
ಮದುವೆಯಾಗಿ ಹತ್ತು ವರ್ಷದ ಬಳಿಕ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿ ಗುರುತು ಸಿಗಬಾರದೆಂದು ದೇಹವನ್ನು ತುಂಡರಿಸಿ ಉತ್ತರ ಪ್ರದೇಶದ ವಿವಿಧ ಭಾಗದಲ್ಲಿ ಎಸೆದಿರುವ ಭಯಾನಕ ಘಟನೆ ನಡೆದಿದೆ.
ಘಟನೆ ವಿವರ:
ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿರುವ ಪಂಕಜ್ ಮೌರ್ಯ ಹಾಗೂ ಸ್ನೇಹ ಕಳೆದ ಹತ್ತು ವರ್ಷದ ಹಿಂದೆ ಮದುವೆಯಾಗಿ ಅನ್ಯೋನ್ಯವಾಗಿದ್ದರು ಆದರೆ ಪತ್ನಿನಿತ್ಯ ಮದ್ಯ ಸೇವನೆ ಮಾಡುತ್ತಿದ್ದಳು ಎನ್ನಲಾಗಿದೆ ಅಲ್ಲದೆ ಸ್ನೇಹಾ ಬೇರೆಯವರೊಂದಿಗೂ ಸಂಬಂಧ ಹೊಂದಿದ್ದಳು ಎನ್ನಲಾಗಿದೆ ಈ ವಿಚಾರವಾಗಿ ಕೆಲವೊಂದು ದಿನ ಮನೆಗೂ ಬರುತ್ತಿರಲಿಲ್ಲ ಎನ್ನಲಾಗಿದೆ, ಇದೆಲ್ಲಾ ವಿಚಾರದಿಂದ ವಿಚಲಿತನಾದ ಪತಿ ಪಂಕಜ್ ತನ್ನ ಪತ್ನಿಯನ್ನು ಕೊಲ್ಲುವ ನಿರ್ಧಾರಕ್ಕೆ ಬಂದಿದ್ದು ಅಲ್ಲದೆ ಈತನ ಕೃತ್ಯಕ್ಕೆ ಆತನ ಸ್ನೇಹಿತರನ್ನು ಬಳಸಿಕೊಳ್ಳಲು ನಿರ್ಧರಿಸಿದ್ದಾನೆ.
ಪಂಕಜ್ ಹಾಕಿದ ಲೆಕ್ಕಾಚಾರದಂತೆ ಸ್ನೇಹಿತನ ಸಹಕಾರದೊಂದಿಗೆ ಪತ್ನಿಯನ್ನು ಕೊಲೆಗೈದು ಇನ್ನು ಗುರುತು ಸಿಗಬಾರದೆಂದು ದೇಹವನ್ನು ತುಂಡರಿಸಿ ಸೀತಾಪುರ ಜಿಲ್ಲೆಯ ಒಂದು ಕಡೆ ಎಸೆದಿದ್ದಾನೆ.
ಕೊನೆಗೂ ಪ್ರಕರಣ ಬೆಳಕಿಗೆ ಬಂದಿದ್ದು ನವೆಂಬರ್ 8 ರಂದು ಸೀತಾಪುರ ಪೊಲೀಸರು ಸ್ನೇಹಾ ಮೃತದೇಹದ ಭಾಗಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ತನ್ನ ಪತ್ನಿಯನ್ನು ತಾನೇ ಕೊಲೆ ಮಾಡಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿ ಪಂಕಜ್ ಮೌರ್ಯ ಹಾಗೂ ಆತನ ಸ್ನೇಹಿತ ದುರ್ಜನ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಶೃಂಗೇರಿ: ಈಡೇರದ ಆಸ್ಪತ್ರೆಯ ಕನಸು, ತಮಟೆ ಬಾರಿಸಿ ಹೋರಾಟಕ್ಕೆ ಮುಂದಾದ ಯುವಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ