ಕೊನೆಗೂ ಉತ್ತರ ಕಂಡ ಬಿಜೆಪಿ
Team Udayavani, Mar 12, 2017, 3:45 AM IST
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕಾಂಗ್ರೆಸ್ ಸ್ವಯಂಕೃತಾಪರಾಧದಿಂದ ಸೋಲು ಕಂಡಿದೆ. ಕಳೆದ ವರ್ಷದ
ಮಧ್ಯಭಾಗದಲ್ಲಿ ಸರ್ಕಾರ ರಚನೆಗಾಗಿ ನಡೆದಿದ್ದ ಕಿತ್ತಾಟದಲ್ಲಿ ಹಾಗೂ ಮಾಜಿ ಮುಖ್ಯಮಂತ್ರಿ ವಿಜಯ್ ಬಹುಗುಣ
ನೇತೃತ್ವದಲ್ಲಿ ಹಲವು ಪ್ರಮುಖ ಮುಖಂಡರು ಪಕ್ಷ ತೊರೆದು ಬಿಜೆಪಿ ಸೇರಿದ್ದು ಕಾಂಗ್ರೆಸ್ಗೆ ದೊಡ್ಡ ಪೆಟ್ಟು ಕೊಟ್ಟಿದೆ.
ಮತದಾನ ನಂತರದ ಎಲ್ಲ ಸಮೀಕ್ಷೆಗಳ ಊಹೆ ಮೀರಿ ಉತ್ತರಾಖಂಡದಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿ, ಹರೀಶ್
ರಾವತ್ ನೇತೃತ್ವದ ಕಾಂಗ್ರೆಸ್ ಪಡೆಗೆ ದೊಡ್ಡ ಸೋಲಿನ ರುಚಿ ತೋರಿಸಿದೆ. ಬಹುತೇಕ ಪ್ರಧಾನಿ ಮೋದಿ ಹೆಸರಲ್ಲೇ ಚುನಾವಣೆ ಎದುರಿಸಿದ ಬಿಜೆಪಿ, 70ರ ಪೈಕಿ 57 ಕ್ಷೇತ್ರಗಳನ್ನು ಕಬಳಿಸುವ ಮೂಲಕ ಪ್ರಚಂಡ ಬಹುಮತ ಗಳಿಸಿದೆ.
ಸ್ವತಃ ರಾವತ್, ತಾವು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸುವ ಮೂಲಕ ಕಾಂಗ್ರೆಸ್ಗೆ ಭಾರಿ ಹಿನ್ನಡೆಯಾಗಿದ್ದು, ಆಡಳಿತ ವಿರೋಧಿ ಅಲೆ ಸ್ಪಷ್ಟವಾಗಿ ಗೋಚರಿಸಿದೆ. ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ನಿಂದ ಬಂಡಾಯವೆದ್ದು ಬಿಜೆಪಿ ಸೇರಿದ್ದ ವಿಜಯ್ ಬಹುಗುಣರ ಪುತ್ರ ಸೌರವ್ ಬಹುಗುಣ ಜಯಗಳಿಸಿರುವುದು ಕಾಂಗ್ರೆಸ್ಗೆ ಮುಜುಗರ ಉಂಟುಮಾಡಿದೆ. ಉತ್ತರಾಖಂಡದಲ್ಲಿ ಈ ಚುನಾವಣೆಯನ್ನು ಬಾಹುಬಲಿ (ರಾವತ್) ಮತ್ತು ಬಾ (ಬಹುಗುಣ) ನಡುವಿನ ಯುದ್ಧವೆಂದೇ ಪರಿಗಣಿಸಲಾಗಿತ್ತು. ಈ ಯುದ್ಧದಲ್ಲಿ ವಿಜಯ್ ಬಹುಗುಣ ತಮ್ಮ ಸಾಮರ್ಥ್ಯ
ಸಾಬೀತುಪಡಿಸುವಲ್ಲಿ ಸಂಪೂರ್ಣ ಸಫಲರಾಗಿದ್ದಾರೆ.
ರಾಜ್ಯಾಧ್ಯಕ್ಷರ ಸೋಲು: ಉತ್ತರಾಖಂಡ ರಾಜ್ಯ ಕಾಂಗ್ರೆಸ್ ಹಾಗೂ ಬಿಜೆಪಿ ಅಧ್ಯಕ್ಷರಿಬ್ಬರೂ ಸೋಲನುಭವಿಸಿರುವುದು
ಈ ಚುನಾವಣೆಯ ಮತ್ತೂಂದು ವಿಶೇಷ. ಉತ್ತರಾಖಂಡ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಿಶೋರ್ ಉಪಾದ್ಯಾಯ್ ಹಾಗೂ
ಬಿಜೆಪಿ ರಾಜ್ಯಾಧ್ಯಕ್ಷ ಅಜಯ್ ಭಟ್ ಪರಾಭವಗೊಂಡಿದ್ದಾರೆ.
ಸಿಎಂ ಯಾರು?: ಉತ್ತರಾಖಂಡದ ಸಿಎಂ ಹುದ್ದೆ ಅಲಂಕರಿಸಲು ಬಿಜೆಪಿಯಲ್ಲಿ ಹಿರಿಯ ನಾಯಕರ ದಂಡೇ ಸಿದ್ಧವಾಗಿ ನಿಂತಿದೆ. ಅದರಲ್ಲೂ ಮಾಜಿ ಮುಖ್ಯಮಂತ್ರಿಗಳಾಗಿರುವ ಬಿಸಿ ಖಂಡೂರಿ, ವಿಜಯ್ ಬಹುಗುಣ, ಭಗತ್ ಸಿಂಗ್ ಕೋಶಿಯಾರಿ, ರಮೇಶ್ ಪೋಕ್ರಿಯಾಲ್ ಈ ರೇಸ್ನಲ್ಲಿರುವ ಪ್ರಮುಖರು.
ರಾವತ್ಗೆ ಮುಖಭಂಗ
ಸಿಎಂ ಹರೀಶ್ ರಾವತ್ ತಾವು ಸ್ಪಧಿಸಿದ್ದ ಎರಡೂ ಕ್ಷೇತ್ರಗಳಲ್ಲೂ ಸೋಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಅಲ್ಲದೆ ಸೋಲು ಖಚಿತವಾಗುತ್ತಿದ್ದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿಎಂ ರಾವತ್ ಸ್ಪರ್ಧಿಸಿದ್ದ ಹರಿದ್ವಾರ ಗ್ರಾಮಾಂತರ ಹಾಗೂ ಕಿಚ್ಚಾ ಕ್ಷೇತ್ರಗಳೆರಡರಲ್ಲೂ ಸೋಲನುಭವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ